ನವದೆಹಲಿ: ದೇಶದ 16ನೇ ರಾಷ್ಟ್ರಪತಿ ಚುನಾವಣೆಗಾಗಿ ಮತದಾನ ಆರಂಭವಾಗಿದೆ. ಸಂಸತ್ ಭವನ ಹಾಗೂ ರಾಜ್ಯಗಳ ವಿಧಾನಸಭೆಯಲ್ಲಿ ಮತದಾನ ನಡೆಯುತ್ತಿದ್ದು, ಚುನಾಯಿತ ಸಂಸದರು ಹಾಗೂ ರಾಜ್ಯಗಳ ವಿಧಾನಸಭೆ ಸದಸ್ಯರು ಮತ ಚಲಾಯಿಸುತ್ತಿದ್ದಾರೆ.

ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್, ಸಂಸದ ಶಿವಕುಮಾರ್ ಉದಾಸಿ ಸೇರಿದಂತೆ ಹಲವು ಮಂದಿ ಮತ ಚಲಾಯಿಸಿದರು.
ಇನ್ನೂ ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಲಖನೌ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ತಮಿಳುನಾಡಿನಲ್ಲಿ ಸಿಎಂ ಎಂ. ಕೆ. ಸ್ಟಾಲಿನ್, ಆಂಧ್ರ ಪ್ರದೇಶದಲ್ಲಿ ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್ ರೆಡ್ಡಿ, ಉತ್ತರಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮೊದಲಾದವರು ಮತದಾನ ಮಾಡಿದರು.
ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ ಮತ್ತಿತರರು ಮತ ಚಲಾಯಿಸಿದರು.
Comments are closed.