ಕರಾವಳಿ

ಗೋಕಳವು, ಕ್ರಿಮಿನಲ್ ಚಟುವಟಿಕೆಯಲ್ಲಿ ಸಕ್ರೀಯವಾಗಿರುವ ಗುಲ್ವಾಡಿ ಅಬೂಬಕ್ಕರ್’ಗೆ 6 ತಿಂಗಳು ಗಡಿಪಾರು..!

Pinterest LinkedIn Tumblr

(ವರದಿ- ಯೋಗೀಶ್ ಕುಂಭಾಸಿ)
ಕುಂದಾಪುರ: ಕಳವು, ಅಕ್ರಮ ಜಾನುವಾರು ಸಾಗಾಟ ಮತ್ತು ಹಿಂಸೆ ಪ್ರಕರಣಗಳಲ್ಲಿ ಭಾಗಿಯಾಗಿದ ಆರೋಪಿಯನ್ನು ಗಡಿಪಾರು ಮಾಡಿ ಆದೇಶ ಮಾಡಲಾಗಿದೆ.

ಕುಂದಾಪುರ ಗ್ರಾಮಾಂತರ ಠಾಣಾ ಸರಹದ್ದಿನ ಗುಲ್ವಾಡಿ ಗ್ರಾಮದ ಕಾಂಡ್ಲಗದ್ದೆ ನಿವಾಸಿ 43 ವರ್ಷ ಪ್ರಾಯದ ಅಬೂಬಕ್ಕರ್ ಎಂಬಾತನು ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಹಾಗೆಯೆ ತನ್ನ ಸಹಚರರೊಂದಿಗೆ ತಮ್ಮದೇ ಆದ ಒಂದು ತಂಡವನ್ನು ಕಟ್ಟಿಕೊಂಡು, ಕಳವು, ಅಕ್ರಮ ಜಾನುವಾರು ಸಾಗಾಟ ಮತ್ತು ಹಿಂಸೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು. ಈತನ ವಿರುದ್ದ 9 ಪ್ರಕರಣಗಳು ದಾಖಲಾಗಿದೆ. ಆತನು ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಹೊರ ಬಂದ ನಂತರವೂ ಕೂಡ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪವಿದೆ.

ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯು ಕೋಮು ಸೂಕ್ಷ್ಮ ಪ್ರದೇಶವಾಗಿದ್ದು ಈ ಬಗ್ಗೆ ಮೇಲಾಧಿಕಾರಿಯವರ ಆದೇಶದಂತೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಉಪ ನಿರೀಕ್ಷಕರು ದಂಡಾಧಿಕಾರಿ, ಕುಂದಾಪುರ ಉಪವಿಭಾಗರವರಿಗೆ ಆರೋಪಿ ವಿರುದ್ದ ಕರ್ನಾಟಕ ಪೊಲೀಸ್ ಕಾಯಿದೆ 1963 ಅಡಿಯಲ್ಲಿ ಗಡಿಪಾರು ಕ್ರಮ ತೆಗೆದುಕೊಳ್ಳುವಂತೆ ವರದಿಯನ್ನು ಪೊಲೀಸ್ ಅಧೀಕ್ಷಕರ ಮುಖಾಂತರ ಸಲ್ಲಿಸಿದ್ದರು.

ಈ ವರದಿಯನ್ನು ಪರಿಶೀಲಿಸಿ ಕುಂದಾಪುರ ಉಪವಿಭಾಗದ ದಂಡಾಧಿಕಾರಿ‌ ಕೆ. ರಾಜು ಅವರು ಜು.26 ರಂದು ಅಬೂಬಕ್ಕರ್ ಎಂಬಾತನಿಗೆ 6 ತಿಂಗಳ ಕಾಲ ಗಡಿಪಾರು ಶಿಕ್ಷೆ ವಿಧಿಸಿ, ಜಮಖಂಡಿ ಉಪವಿಭಾಗಕ್ಕೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಆಸಾಮಿಯು 6 ತಿಂಗಳ ಒಳಗೆ ಸಂಬಂಧಪಟ್ಟ ಪ್ರಾಧಿಕಾರದ ಅನುಮತಿಯನ್ನು ಪಡೆಯದೆ ಕುಂದಾಪುರ ಪೊಲೀಸ್ ಉಪವಿಭಾಗದಲ್ಲಿ ಯಾವುದೇ ಕಾರಣಕ್ಕೂ ಕಂಡು ಬಂದಲ್ಲಿ ಕುಂದಾಪುರ ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರಿಗೆ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ:61 ರಂತೆ ಬಂಧನ ಮಾಡುವಂತೆ ಆದೇಶವನ್ನು ಹೊರಡಿಸಿಲಾಗಿದೆ.

Comments are closed.