ಕರಾವಳಿ

ಕುಂದಾಪುರದ ಕೊರವಡಿಯಲ್ಲಿ ಬೆಂಕಿ ಹಚ್ಚಿಕೊಂಡು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ

Pinterest LinkedIn Tumblr

ಕುಂದಾಪುರ: ಮನೆಯಲ್ಲಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಕುಂಭಾಸಿ ಸಮೀಪದ ಕೊರವಡಿಯಲ್ಲಿ ಆ.1 ಸೋಮವಾರ ನಡೆದಿದೆ.

ಕೋಟ ಪಡುಕರೆ ಫ್ರೌಢಶಾಲೆಯ 10ತರಗತಿಯ ವಿದ್ಯಾರ್ಥಿ ಅನನ್ಯ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

ವಿದ್ಯಾರ್ಥಿನಿ ಶಾಲೆಗೆ ಹೊರಡುವ ಸಂದರ್ಭದಲ್ಲೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಒಂದು ದಿಕ್ಕಿನ ಕೋಣೆಗೆ ತೆರಳಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದಾಳೆ. ಈ ವೇಳೆ ಪಕ್ಕದ ಮನೆಯವರು ಬೆಂಕಿಯನ್ನು ಕಂಡು ಮನೆ ಬಳಿ ಆಗಮಿಸಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಬಾಲಕಿಯನ್ನು ಚಿಕಿತ್ಸೆ ಸಲುವಾಗಿ ಮಣಿಪಾಲದ ಖಾಸಗಿ ಆಸ್ಪತ್ರೆ ಕೊಂಡೊಯ್ದರೂ ಕೂಡ ಸುಟ್ಟ ಗಂಭೀರ ಗಾಯದಿಂದಾಗಿ ಆಕೆ ಮೃತಪಟ್ಟಿದ್ದಾಳೆ.

ಬಾಲಕಿ ತಂದೆ,ತಾಯಿ ಬೆಂಗಳೂರಿನಲ್ಲಿ ನೆಲೆಸಿದ್ದು ಆಕೆ ಅಜ್ಜಿ ಮತ್ತು ಚಿಕ್ಕಮ್ಮನ ಜೊತೆ ವಾಸ್ತವ್ಯ ಇದ್ದಳು ಎನ್ನಲಾಗಿದೆ.

ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Comments are closed.