ಉಡುಪಿ: ಬೈಂದೂರು ತಾಲೂಕು ವ್ಯಾಪ್ತಿಯ ಉಪ್ಪುಂದ ಸಮೀಪ ಮಳೆಗಾಲದ ಸಾಂಪ್ರದಾಯಿಕ ಪಟ್ಟಿ ಬಲೆ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿ ಓರ್ವ ಮೃತಪಟ್ಟು, ನೀರುಪಾಲಾದ ಇನ್ನೊಬ್ಬರ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಮೀನುಗಾರ ನಾಗೇಶ್ (29) ಮೃತಪಟ್ಟವರು. ಸತೀಶ್ (31) ನೀರುಪಾಲಾಗಿದ್ದಾರೆ.

ಸಚಿನ್ ಎಂಬವರ ಮಾಲಕತ್ವದ ದೋಣಿಯು ಅಲೆಗಳ ಹೊಡೆತಕ್ಕೆ ಸಿಲುಕಿ ಸಂಪೂರ್ಣವಾಗಿ ಮುಳುಗಡೆಯಾಗಿದೆ.ಕಡಲು ಪಾಲಾದ ಮೀನುಗಾರರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ದೋಣಿಯಲ್ಲಿ ಒಟ್ಟು 8 ಮಂದಿ ಇದ್ದರು. ಉಳಿದ ನಾಲ್ವರು ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಬೈಂದೂರು ತಹಸಿಲ್ದಾರ್ ಶ್ರೀಕಾಂತ್ ಹೆಗಡೆ ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ, ಬೈಂದೂರ್ ಪೊಲೀಸ್, ಅಗ್ನಿಶಾಮಕ ದಳ, ಪೋಸ್ಟಲ್ ಗಾರ್ಡ್, ಕುಂದಾಪುರ ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕಿ ಸುಮಲತಾ , ಮುಳುಗುತಜ್ಞ ದಿನೇಶ್ ಖಾರ್ವಿ ಹಾಗೂ ತಂಡ, ಬೈಂದೂರು ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಆನಂದ್ ಖಾರ್ವಿ ಉಪ್ಪುಂದ ಮೊದಲಾದವರು ಆಗಮಿಸಿದ್ದರು.
ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸಚಿನ್ ಖಾರ್ವಿ ಮಾಲಿಕತ್ವದ ಮಾಸ್ತಿ ಮರ್ಲು ಚಿಕ್ಕು ಪ್ರಸಾದ ಹೆಸರಿನ ನಾಡದೋಣಿಯಲ್ಲಿ ಮೀನುಗಾರಿಕೆ ಬೆಳಗ್ಗೆ 11:00 ಗಂಟೆಗೆ ಭಟ್ಕಳ ಬಂದರಿನಿಂದ ಮೀನುಗಾರಿಕೆ ಹೊರಟು ಮೀನುಗಾರಿಕೆ ಮುಗಿಸಿ ದಡಕ್ಕೆ ಬರುತ್ತಿರುವಾಗ ಸೋಮವಾರ 4 ಗಂಟೆಗೆ ಬೈಂದೂರು ತಾಲೂಕಿನ ಉಪ್ಪುಂದ ಮಡಿಕಲ್ ನ ಕರ್ಕಿಕಳಿ ಎಂಬಲ್ಲಿ ಸಮುದ್ರದ ಅಲೆಗೆ ಸಿಕ್ಕಿ ದೋಣಿ ಮುಗಿಚಿ ಬಿದ್ದಿತ್ತು. ದೊಣಿಯಲ್ಲಿದ್ದ ಎಂಟು ಜನರಲ್ಲಿ 7 ಜನರು ಈಜಿ ದಡ ಸೇರಿದ್ದು ನಾಗೇಂದ್ರ ಖಾರ್ವಿ(29), ನಾಗೇಶ್ ಖಾರ್ವಿ (24), ದೇವೆಂದ್ರ ಖಾರ್ವಿ(25), ಅಣಪ್ಪ ಖಾರ್ವಿ(45), ಆದರ್ಶ ಖಾರ್ವಿ(20). ಸಚಿನ್ ಖಾರ್ವಿ(25), ಇನ್ನೊಬ್ಬ ಮೀನುಗಾರ ನಾಗೇಶ್ ಖಾರ್ವಿ(30) ಎಂಬುವವನು ತೀವ್ರ ಅಸ್ವಸ್ತರಾಗಿದ್ದು ಅಂಬುಲೆನ್ಸ್ ಮೂಲಕ ಬೈಂದೂರು ಸರಕಾರಿ ಸಮುದಾಯ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಸತೀಶ್ ಖಾರ್ವಿ(34) ನೀರುಪಾಲಾಗಿದ್ದಾರೆ. ಈ ಮೀನುಗಾರರು ಉಪ್ಪುಂದ ಗ್ರಾಮದ ಕರ್ಕಿಕಳಿ ನಿವಾಸಿಗಳು ಎಂಬ ಮಾಹಿತಿ ಲಭಿಸಿದೆ.
Comments are closed.