ಕರ್ನಾಟಕ

‘ನಂದಿನಿ’ ಉತ್ಪನ್ನಗಳಿಗೆ ನಟ ಶಿವರಾಜ್​ಕುಮಾರ್ ರಾಯಭಾರಿಯಾಗಲು ಒಪ್ಪಿಗೆ

Pinterest LinkedIn Tumblr

ಬೆಂಗಳೂರು: ನಟ ಶಿವರಾಜ್​ಕುಮಾರ್ ಅವರು ನಂದಿನಿ ಉತ್ಪನ್ನಗಳ ರಾಯಭಾರಿ ಆಗಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಕೆಎಂಎಫ್​ ಅಧ್ಯಕ್ಷ ಭೀಮಾ ನಾಯ್ಕ್ ಅವರು ತಿಳಿಸಿದ್ದಾರೆ.

ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹಾಗೂ ಎಂಡಿ ಜಗದೀಶ್‌‌ ಅವರು‌ ನಟ ಶಿವರಾಜ್​ಕುಮಾರ್ ಬಳಿ ಈ ಬಗ್ಗೆ ಮನವಿ ಮಾಡಿದ್ದರು. ಶಿವರಾಜ್​ಕುಮಾರ್ ಅವರು ಈ ಮನವಿಗೆ ಸ್ಪಂದಿಸಿದ್ದಾರೆ. ನಂದಿನಿ ಉತ್ಪನ್ನಗಳ ಜಾಹೀರಾತಿನಲ್ಲಿ ಶಿವರಾಜ್​ಕುಮಾರ್ ಅವರು ಕಾಣಿಸಿಕೊಳ್ಳಲಿದ್ದು ಶಿವಣ್ಣಗೆ ಹೂಗುಚ್ಛ ನೀಡಿ ಭೀಮಾನಾಯ್ಕ್ ಅಭಿನಂದಿಸಿದ್ದಾರೆ.

ಡಾ. ರಾಜ್​ಕುಮಾರ್ ಅವರು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಂಭಾವನೆ ಪಡೆಯದೇ ಕೂಡ ನಂದಿನಿ ಉತ್ಪನ್ನದ ರಾಯಭಾರಿ ಆಗಿದ್ದರು. ಅವರು ಪ್ರಚಾರಕ್ಕೆ ಯಾವುದೇ ಸಂಭಾವನೆ ಪಡೆದಿರಲಿಲ್ಲ. ಬಳಿಕ ಪುನೀತ್ ರಾಜಕುಮಾರ್ ಕೂಡ ತಂದೆಯೇ ಹಾದಿಯಲ್ಲಿ ಸಾಗಿದ್ದರು. ಅವರು ಹಲವು ವರ್ಷಗಳ ಕಾಲ ನಂದಿನಿ ಪ್ರಾಡಕ್ಟ್​​ಗಳ ಪ್ರಚಾರದಲ್ಲಿ ಸಂಭಾವನೆ ಪಡೆಯದೇ ತೊಡಗಿಸಿಕೊಂಡಿದ್ದರು ಎಂಬ ಮಾಹಿತಿಯಿದೆ.

 

Comments are closed.