ಕರ್ನಾಟಕ

ಬೆಂಗಳೂರು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್​​ ಎಕ್ಸ್​ಪ್ರೆಸ್​​​​ ರೈಲಿನಲ್ಲಿ ಅಗ್ನಿ ಅವಘಡ

Pinterest LinkedIn Tumblr

ಬೆಂಗಳೂರು: ಬೆಂಗಳೂರಿನ ಹೃದಯ ಭಾಗ ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್​​ ಎಕ್ಸ್​ಪ್ರೆಸ್​​​​ ರೈಲಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ತಾಂತ್ರಿಕ ಸಮಸ್ಯೆಯಿಂದ ರೈಲ್ವೆ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಬಳಿಕ ಬೆಂಕಿ ರೈಲಿನ ಎರಡು ಕೋಚ್​​​ಗಳಿಗೆ ಆವರಿಸಿದೆ.

ರೈಲು ಸಂಖ್ಯೆ 11301 ಉದ್ಯಾನ್ ಎಕ್ಸ್‌ಪ್ರೆಸ್ ಪ್ಲಾಟ್‌ಫಾರ್ಮ್ ಸಂಖ್ಯೆ 3 ರಲ್ಲಿ 5.45 ಗಂಟೆಗೆ ಸಂಗೊಳ್ಳಿ ರಾಯಣ್ಣ ಬಸ್ ನಿಲ್ದಾಣಕ್ಕೆ ಬಂದಿತು. ಸುಮಾರು 7.10ಗಂಟೆಗೆ ರೈಲಿನ ಬಿ1 ಮತ್ತು ಬಿ2 ಬೋಗಿಗಳಲ್ಲಿ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣ ಅಗ್ನಿಶಾಮಕ ದಳಕ್ಕೆ ಸಂದೇಶ ನೀಡಲಾಗಿದೆ. ಬೆಳಗ್ಗೆ 7.35ಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಈ ವೇಳೆ ರೈಲಿನೊಳಗೆ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ಸುತ್ತಮುತ್ತಲ ರೈಲುಗಳಿಗೂ ಯಾವುದೇ ಹಾನಿಯುಂಟಾಗಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದಿಢೀರ್​​ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿದೆ. ರೈಲ್ವೆ ನಿಲ್ದಾಣ, ಮೆಜೆಸ್ಟಿಕ್ ಬಸ್ ನಿಲ್ದಾಣದವರೆಗೆ ಹೊಗೆ ಆವರಿಸಿದೆ. ರೈಲು ಬೆಳಗ್ಗೆ 6 ಗಂಟೆಗೆ ಕೆಎಸ್​ಆರ್​​ ರೈಲು ನಿಲ್ದಾಣಕ್ಕೆ ಆಗಮಿಸಿದೆ. ಬೆಳಗ್ಗೆ 7.30 ಕ್ಕೆ ಬೆಂಕಿ ಹೊತ್ತಿಕೊಂಡಿದೆ. ಸದ್ಯ ಬೆಂಕಿ ತಗುಲಿದ ಬೋಗಿಯಿಂದ ಉಳಿದ ಬೋಗಿಗಳನ್ನು ಬೇರ್ಪಡಿಸಲಾಗಿದೆ. ಅದೃಷ್ಟವಶಾವತ್​ ಯಾವುದೇ ಪ್ರಯಾಣಿಕರು ರೈಲಿನಲ್ಲಿ ಇರಲಿಲ್ಲ.

ತನಿಖೆ ಬಳಿಕ ಘಟನೆಗೆ ಕಾರಣ ಏನು ಎಂಬುವುದು ತಿಳಿಯಲಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ತಾಂತ್ರಿಕ ದೋಷವೇ ಬೆಂಕಿ ಅನಾಹುತಕ್ಕೆ ಕಾಕಣ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

Comments are closed.