ಕುಂದಾಪುರ: ಖಾಸಗಿ ಶಾಲೆಗಳ ಪೈಪೋಟಿ ನಡುವೆ ಸರಕಾರಿ ಶಾಲೆಗಳನ್ನು ಉಳಿಸುವ ಮಹತ್ತರ ಜವಬ್ದಾರಿ ಶಿಕ್ಷಕರ ಜೊತೆಗೆ ಪೋಷಕರದ್ದಾಗಿದೆ. ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನು ಸರಕಾರಿ ಕನ್ನಡ ಶಾಲೆಗೆ ಸೆಳೆಯುವ ಕೆಲಸವಾಗಬೇಕಿದೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಡಾಕೆರೆ-ಹಂಗಳೂರಿನಲ್ಲಿ ವಿವೇಕ ತರಗತಿಗಳ ಕೋಣೆಯನ್ನು ಅವರು ಶನಿವಾರ ಉದ್ಘಾಟಿಸಿ ಮಾತನಾಡಿದರು.
ಇದೇ ವೇಳೆ ಕಟ್ಟಡ ಕಾಮಗಾರಿ ಗುತ್ತಿಗೆದಾರ ಸತ್ಯನಾರಾಯಣ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ಇಲಾಖೆಯ ಶೂಭಾಗ್ಯದ ಶೂ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯೆ ಲಕ್ಷ್ಮೀ ಮಂಜು ಬಿಲ್ಲವ, ಹಂಗಳೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ, ಉಪಾಧ್ಯಕ್ಷ ಸತೀಶ್ ಶೇರಿಗಾರ್,
ಮಾಜಿ ಅಧ್ಯಕ್ಷ ಆನಂದ ಪೂಜಾರಿ, ಸದಸ್ಯರಾದ ಸುಧಾಕರ್ ಪೂಜಾರಿ, ರೋಶನ್ ಬರೆಟ್ಟೋ, ಜನೇಟಾ ಮೆಂಡೊನ್ಸಾ, ಶಾಲಾ ಅಭಿವೃದ್ಧಿ ಅಧ್ಯಕ್ಷ ರವೀಂದ್ರ ಆಚಾರ್ಯ, ಎಸ್.ಡಿ.ಎಂ.ಸಿ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.
ತಾಲೂಕು ಪಂಚಾಯತಿ ಮಾಜಿ ಸದಸ್ಯ ಮಂಜು ಬಿಲ್ಲವ ಪ್ರಸ್ತಾವಿಕ ಮಾತುಗಳನ್ನಾಡಿದರು. ಶಾಲಾ ಮುಖ್ಯೋಪಾಧ್ಯಾಯ ಟಿ. ಸೀತಾರಾಮ್ ಶೆಟ್ಟಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಮ ಕೆ. ನಿರೂಪಿಸಿದರು. ಸಹಶಿಕ್ಷಕಿ ಶ್ಯಾಮಲಾ ಕೆ. ವಂದಿಸಿದರು.
Comments are closed.