ಕರಾವಳಿ

ಬೈಂದೂರು: ಅಡಿಕೆ ಕಳವು ಪ್ರಕರಣದಲ್ಲಿ ನಾಲ್ವರು ಆರೋಪಿಗಳ ಬಂಧನ

Pinterest LinkedIn Tumblr

ಕುಂದಾಪುರ: ಯಡ್ತರೆ ಗ್ರಾಮದ ಹಡಿನಗದ್ದೆ ಎಂಬಲ್ಲಿ ಎರಡು ತಿಂಗಳ ಹಿಂದೆ ನಡೆದ ಲಕ್ಷಾಂತರ ರೂ. ಮೌಲ್ಯದ ಅಡಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ದ.ಕ. ಜಿಲ್ಲೆಯ ಕಡಬ ತಾಲೂಕಿನ ಬಾಳ್ತಿಲ ಗ್ರಾಮ ನೂಜಿ ಮಾವಿನಕಟ್ಟೆಯ ಸಂತೋಷ(35), ಭಟ್ಕಳ ಗುಳ್ಳಿ ನಿವಾಸಿಗಳಾದ ಧಾರವಾಡ ಮೂಲದ ಶಾನೂರು ಬಾಬುಲಾಲ್‌ ನವಾಜ್(31), ಸ್ವಾಜಾ ಮಹಮ್ಮದ್(26), ಸಾಧಿಕ್(27) ಬಂಧಿತ ಆರೋಪಿಗಳು. ಬಂಧಿತರಿಂದ ಕಳವು ಮಾಡಿದ 455 ಕೆ.ಜಿ ಅಡಿಕೆ ಮತ್ತು ಕೃತ್ಯಕ್ಕೆ ಬಳಸಿಕತ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

(ಕಾರ್ಯಾಚರಣೆಯಲ್ಲಿದ್ದ ಪೊಲೀಸರ ತಂಡ)

ಹಡಿನಗದ್ದೆಯ ಮಸೂದ್ ಪಟೇಲ್ ಎಂಬವರು ತನ್ನ ತೋಟ ಬೆಳೆದ ಸುಮಾರು 200 ಚೀಲ ಒಣಗಿಸಿದ ಸಿಪ್ಪೆಅಡಿಕೆಯನ್ನು ಗೋಡೌನ್‌ನಲ್ಲಿ ಇಟ್ಟಿದ್ದರು. ಮೇ 15ರಿಂದ ಮೇ 22ರ ಮಧ್ಯಾವಧಿಯಲ್ಲಿ ಕಳ್ಳರು ಗೋಡೌನ್ ಬೀಗ ಮುರಿದು ಒಳನುಗ್ಗಿ ಒಟ್ಟು 5.60ಲಕ್ಷ ರೂ. ಮೌಲ್ಯದ ಅಡಿಕೆಗಳನ್ನು ಕಳವು ಮಾಡಿ ಕೊಂಡು ಹೋಗಿರುವುದಾಗಿ ದೂರಲಾಗಿತ್ತು. ಅದರಂತೆ ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೈಂದೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅಡಿಕೆ ಕಳ್ಳತನ ಪ್ರಕರಣಗಳು ವರದಿಯಾಗಿದ್ದು, ಇದರ ತನಿಖೆ ಮತ್ತು ಆರೋಪಿಗಳ ಪತ್ತೆಗೆ ಉಡುಪಿ ಎಸ್ಪಿ ಹರಿರಾಮ್ ಶಂಕರ್ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಸುಧಾಕರ ನಾಯ್ಕ ಹಾಗೂ ಡಿವೈಎಸ್ಪಿ ಹೆಚ್.ಡಿ. ಕುಲಕರ್ಣಿ ಹಾಗೂ ಬೈಂದೂರು ವೃತ್ತ ನಿರೀಕ್ಷಕ ಸವೀತ್ರ ತೇಜ್ ನಿರ್ದೇಶನದಲ್ಲಿ ಬೈಂದೂರು ಎಪ್ಪೆಗಳಾದ ತಿಮ್ಮೇಶ್ ಬಿ.ಎನ್., ನವೀನ ಬೋರಕರ್, ಕೊಲ್ಲೂರು ಎಸ್ಸೆ ವಿನಯ್ ಎಂ. ಕೊರ್ಲಹಳ್ಳಿ ನೇತೃತ್ವದಲ್ಲಿ ಎರಡು ತಂಡಗಳನ್ನು ರಚಿಸಲಾಗಿತ್ತು.

ಅದರಂತೆ ಕಾರ್ಯಾಚರಣೆ ನಡೆಸಿದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಈ ಕಾರ್ಯಾಚರಣೆಯಲ್ಲಿ ಸಿಬ್ಬಂದಿ ನಾಗೇಂದ್ರ, ಕೊಲ್ಲೂರು ಠಾಣೆ, ಸುರೇಶ್, ಚಿದಾನಂದ, ಮಾಳಪ್ಪ ದೇಸಾಯಿ, ಪರಯ್ಯ ಮಠಪತಿ, ರವೀಂದ್ರ, ಅಶೋಕ, ಹಾಗೂ ಚಂದ್ರ ಪಾಲ್ಗೊಂಡಿದ್ದರು.

Comments are closed.