ಉಡುಪಿ: ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಉಡುಪಿ ಜಿಲ್ಲೆ ಪುತ್ತೂರಿನ ಸುಬ್ರಹ್ಮಣ್ಯ ನಗರದ ಲಿಂಗೋಟ್ಟುಗುಡ್ಡೆಯಲ್ಲಿ ನಡೆದಿದೆ.

ವಿನಯ್ ದೇವಾಡಿಗ (40) ಕೊಲೆಯಾದ ವ್ಯಕ್ತಿ. ವಿನಯ್ ಎಂದಿನಂತೆ ಮನೆಯಲ್ಲಿ ಊಟ ಮಾಡಿ ಮಲಗಿದ್ದರು. ಮಂಗಳವಾರ ರಾತ್ರಿ ಸುಮಾರು 11.45 ಕ್ಕೆ ಬಂದ ದುಷ್ಕರ್ಮಿಗಳು ಜೋರಾಗಿ ಮನೆಯ ಬಾಗಿಲು ಬಡಿದ್ದಾರೆ.
ಭಯಗೊಂಡ ಪತ್ನಿ ಮನೆಯ ಬಾಗಿಲು ತೆರೆದಿದ್ದು, ವಿನಯ್ ಇರುವ ಬಗ್ಗೆ ಕೇಳಿದ ಮೂವರು ದುಷ್ಕರ್ಮಿಗಳು ತತ್ ಕ್ಷಣವೇ ಮಾರಕಾಸ್ತ್ರದೊಂದಿಗೆ ಬೆಡ್ ರೂಮ್ ಗೆ ನುಗ್ಗಿ ವಿನಯ್ ಗೆ ಹಲ್ಲೆ ಮಾಡಿದ್ದಾರೆ. ಇದನ್ನು ತಡೆಯಲು ಬಂದ ಪತ್ನಿಗೂ ಗಾಯವಾಗಿದೆ. ಗಂಭೀರವಾಗಿ ಗಾಯಗೊಂಡ ವಿನಯ್ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಉಡುಪಿ ನಗರ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಅಕ್ಷೇಂದ್ರ, ಅಜಿತ್ ಮತ್ತು ಅಪರಿಚಿತ ವ್ಯಕ್ತಿ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ. ಹತ್ಯೆಗೀಡಾದ ವಿನಯ್ ಆರೋಪಿ ಅಕ್ಷೇಂದ್ರನಿಗೆ ಜೀವನ್ ಎಂಬಾತ ಬೈದಿರುವ ಆಡಿಯೋವನ್ನು ಇತರರಿಗೆ ಶೇರ್ ಮಾಡಿ ವೈರಲ್ ಮಾಡಿದ್ದ ಎನ್ನುವ ಸೇಡಿನಲ್ಲಿ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
Comments are closed.