ಕರಾವಳಿ

ಅಕ್ರಮ ಮರಳು, ಗಣಿಗಾರಿಕೆ ತಡೆಗಟ್ಟಲು ಜಿಲ್ಲೆಯಲ್ಲಿ 29 ಪೊಲೀಸ್‌ ಚೆಕ್‌ ಪೋಸ್ಟ್‌ ರಚನೆ: ಉಡುಪಿ ಎಸ್ಪಿ ಹರಿರಾಂ ಶಂಕರ್

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ಹಾಗೂ ಅಕ್ರಮ ಗಣಿಗಾರಿಕೆ ತಡೆಗಟ್ಟುವ ಬಗ್ಗೆ ಒಟ್ಟು 29 ಪೊಲೀಸ್‌ ಚೆಕ್‌ ಪೋಸ್ಟ್‌ಗಳನ್ನು ಕಾರ್ಯಾಚರಣೆಯಲ್ಲಿ ನಿಯೋಜಿಸಲಾಗಿದೆ. ಈ ಚೆಕ್‌ ಪೋಸ್ಟ್‌ಗಳಲ್ಲಿ ಹಗಲು ಹಾಗೂ ರಾತ್ರಿ ಪಾಳಿಯಲ್ಲಿ ಸಿಬ್ಬಂದಿಗಳನ್ನು ನೇಮಿಸುತ್ತಿದ್ದು ಚೆಕ್‌ ಪೋಸ್ಟ್‌ ಕರ್ತವ್ಯದವರು‌ ಮರಳು ಸಾಗಾಟ ಹಾಗೂ ಕೆಂಪು ಕಲ್ಲು, ಶಿಲೆಕಲ್ಲು ಹಾಗೂ ಎಮ್‌ ಸ್ಯಾಂಡ್‌ ಸಾಗಾಟ ಮಾಡುವ ಎಲ್ಲಾ ವಾಹನಗಳನ್ನು ಚೆಕ್‌ ಮಾಡಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.

ಡಿ.6ರಿಂದ ಸುಮಾರು 3966 ವಾಹನಗಳನ್ನ ಚೆಕ್‌ ಮಾಡಲಾಗಿದೆ. ಅದರಲ್ಲಿ ಸುಮಾರು 11 ವಾಹನಗಳಲ್ಲಿ ಸರಕಾರಕ್ಕೆ ಯಾವುದೇ ರಾಯಧನವನ್ನು ಭರಿಸದೇ, ಯಾವುದೇ ಪರವಾನಿಗೆ ಇಲ್ಲದೇ ಸಾಗಟ ಮಾಡುತ್ತಿರುವ ವಾಹನಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ.  ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಟ ವಾಹನವನ್ನು ಜಪ್ತಿಮಾಡಿ, ವಾಹನದ ಚಾಲಕ ಮತ್ತು ಮಾಲಕರ ವಿರುಧ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಉಳಿದ 10 ವಾಹನಗಳನ್ನು ಮಹಜರು ಮುಖೇನ ಸ್ವಾಧೀನಪಡಿಸಿಕೊಂಡು, ಈ ಬಗ್ಗೆ ಉಡುಪಿ ಗಣಿ ಇಲಾಖೆಗೆ ಮುಂದಿನ ಕ್ರಮದ ಬಗ್ಗೆ ವರದಿ ಕಳುಹಿಸಿಕೊಟ್ಟಿದ್ದು, ಗಣಿ ಇಲಾಖೆಯವರು ಸದ್ರಿ ವಾಹನಗಳ ಆರ್‌ ಸಿ ಮಾಲಿಕರಿಗೆ ಒಟ್ಟು ರೂಪಾಯಿ  3,08,710/- ರೂ ದಂಡ ವಿಧಿಸಿದ್ದಾರೆ.

ಮುಂದೆಯೂ ಸಹ ಸರಕಾರಕ್ಕೆ ಯಾವುದೇ ರಾಯಧನವನ್ನು ಭರಿಸದೇ, ಯಾವುದೇ ಪರವಾನಿಗೆ ಇಲ್ಲದೇ ಸಾಗಟ ಮಾಡುತ್ತಿರುವ ವಾಹನಗಳ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.

Comments are closed.