ಕರಾವಳಿ

ಬೈಂದೂರು | ಹೇರೂರು ಚಿಕ್ತಾಡಿ ಎಂಬಲ್ಲಿ ಬೋನಿಗೆ ಬಿದ್ದ ಚಿರತೆ

Pinterest LinkedIn Tumblr

ಕುಂದಾಪುರ: ಬೈಂದೂರು ತಾಲೂಕಿನ ಹೇರೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಹಲವಾರು ದಿನಗಳಿಂದ ಅಲ್ಲಲ್ಲಿ ಕಾಣಿಸಿಕೊಂಡು ಜನರನ್ನು ಭೀತಿಗೊಳಿಸಿದ್ದ ಚಿರತೆಯೊಂದು ಅರಣ್ಯ ಇಲಾಖೆಯಿಟ್ಟ ಬೋನಿನಲ್ಲಿ ಸೆರೆಯಾಗಿದೆ.

ಸಾರ್ವಜನಿಕರ ದೂರಿನ ಹಿನ್ನೆಲೆ ಚಿರತೆ ಸೆರೆಗಾಗಿ ಹೇರೂರು ಗ್ರಾಮದ ಚಿಕ್ತಾಡಿ ಎಂಬಲ್ಲಿರುವ ಖಾಸಗಿ ತೋಟದಲ್ಲಿ ಅರಣ್ಯ ಅಧಿಕಾರಿಗಳು ಗುರುವಾರದಂದು ಬೋನು ಇರಿಸಿ ಕಾರ್ಯಾಚರಣೆ ಕೈಗೊಂಡಿದ್ದರು. ಶುಕ್ರವಾರ ಮುಂಜಾನೆ ಅಂದಾಜು 3 ವರ್ಷ ಪ್ರಾಯದ ಹೆಣ್ಣು ಚಿರತೆ ಬೋನಿಗೆ ಬಿದ್ದಿರುವುದು ಕಂಡುಬಂದಿದೆ.

ಸ್ಥಳಕ್ಕೆ ಬೈಂದೂರು ವಲಯ ಅರಣ್ಯಾಧಿಕಾರಿ ಜ್ಯೋತಿ ಸಂದೇಶ್ ಕುಮಾರ್, ಉಪವಲಯ ಅರಣ್ಯಾಧಿಕಾರಿ ಕೆ. ಸದಾಶಿವ, ಗಸ್ತು ಅರಣ್ಯ ಪಾಲಕರಾದ ಶೃತಿ ಗೌಡ, ಅರಣ್ಯ ವೀಕ್ಷಕ ಸುರೇಶ್ ಗೌಡ ಸ್ಥಳಕ್ಕೆ ಭೇಟಿ ನೀಡಿದ್ದು ಸೆರೆ ಹಿಡಿದ ಚಿರತೆಯನ್ನು ಸುರಕ್ಷಿತವಾಗಿ ರಕ್ಷಿತಾರಣ್ಯಕ್ಕೆ ಬಿಡಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

Comments are closed.