ಕುಂದಾಪುರ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕುಂದಾಪುರ ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ಯು ಚಾನೆಲ್ನ ನಾಗರಾಜ ರಾಯಪ್ಪನಮಠ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕರ್ನಾಟಕದ ಗಣೇಶ್ ಬೀಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
(ನಾಗರಾಜ್ ರಾಯಪ್ಪನಮಠ, ಗಣೇಶ್ ಬೀಜಾಡಿ, ಶ್ರೀಕಾಂತ ಹೆಮ್ಮಾಡಿ) 
ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯರಾದ ಅಸ್ಟ್ರೋ ಮೋಹನ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಕುಂದಾಪುರದ ಕೋಯಕುಟ್ಟಿ ಹಾಲ್ನಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರುಗಳಾಗಿ ಉದಯವಾಣಿಯ ಸತೀಶ್ ಆಚಾರ್ ಮತ್ತು ಕುಂದಪ್ರಭದ ಸಂತೋಷ್ ಕುಂದೇಶ್ವರ, ಕೋಶಾಧಿಕಾರಿಯಾಗಿ ಕನ್ನಡಪ್ರಭದ ಶ್ರೀಕಾಂತ್ ಹೆಮ್ಮಾಡಿ, ಕಾರ್ಯದರ್ಶಿಗಳಾಗಿ ವಿಜಯವಾಣಿಯ ಮಂಜುನಾಥ ಶೆಣೈ ಜನ್ನಾಡಿ ಹಾಗೂ ದಾಯ್ಜಿ ವಲ್ಡ್೯ನ ರಾಘವೇಂದ್ರ ಬಿ. ಮತ್ತು ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾಗಿ ಪ್ರಶಾಂತ್ ಪಾದೆ, ನಾಗರಾಜ ವಂಡ್ಸೆ, ಶ್ರೀಕರ್ ಎಸ್., ಸತೀಶ್ ಎಂ.ಬಿ., ವಿನಯ ಪಾಯಸ್, ಎಂ.ನಿತ್ಯಾನಂದ, ಸಂತೋಷ್ ಶೆಟ್ಟಿ, ಜಗದೀಶ್ ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾ ಪ್ರಕ್ರಿಯೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸಹಕರಿಸಿದರು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಲೋಕೇಶ್ ಆಚಾರ್ಯ ತೆಕ್ಕಟ್ಟೆ, ಕಾರ್ಯಕಾರಿ ಸಮಿತಿ ಸದಸ್ಯರಾದ ಚಂದ್ರಮ ತಲ್ಲೂರು, ಯೋಗೀಶ್ ಕುಂಭಾಶಿ, ರಾಘವೇಂದ್ರ ಪೈ ಉಪಸ್ಥಿತರಿದ್ದರು.
Comments are closed.