ಕನ್ನಡ ವಾರ್ತೆಗಳು

ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿಯವರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Pinterest LinkedIn Tumblr

BEO_Gopala_Shetty

ಕುಂದಾಪುರ: ಶೈಕ್ಷಣಿಕ ಆಡಳಿತದಲ್ಲಿ ಹೊಸತನದ ಅನ್ವೇಷಣೆ ಮತ್ತು ಅಳವಡಿಕೆಗಾಗಿ ರಾಷ್ಟ್ರೀಯ ಶೈಕ್ಷಣಿಕ ಯೋಜನೆ ಮತ್ತು ಆಡಳಿತ ವಿಶ್ವವಿದ್ಯಾಲಯ ಕೊಡಮಾಡುವ ರಾಷ್ಟ್ರೀಯ ಪ್ರಶಸ್ತಿಯನ್ನು ಶುಕ್ರವಾರ ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿಯವರಿಗೆ ಭಾರತ ಸರಕಾರದ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಪ್ರದಾನ ಮಾಡಿದರು.

ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರೀಯ ಶೈಕ್ಷಣಿಕ ಯೋಜನೆ ಮತ್ತು ಆಡಳಿತ ವಿಶ್ವವಿದ್ಯಾನಿಲಯದ ಕುಲಪತಿ ಗೋಪಾಲ್, ಕೇಂದ್ರ ಶಾಲಾ ಶಿಕ್ಷಣ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ರಾಜಶ್ರೀ ಭಟ್ಟಾಚಾರ್ಯ ಇದ್ದರು.

Write A Comment