ಮಂಗಳೂರು ಡಿ.10: ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ ಮಾನವ ಹಕ್ಕುಗಳ ದಿನಾಚರಣೆಯನ್ನು ಬುಧವಾರ ದ.ಕ.ಜಿಲ್ಲಾಧಿಕಾರಿ ಕಚೇರಿಯ 2 ನೇ ಮಹಡಿಯ ಸಭಾಂಗಣದಲ್ಲಿ ನಡೆಯಿತು.
ಮಾನವ ಹಕ್ಕುಗಳನ್ನು ಎಲ್ಲ ಮನುಷ್ಯನು ಸನ್ಮಾನಿಸಿ ಗೌರವಿಸಲು ಕಳಿಯಬೇಕು, ಮಂಗಳೂರಿನ ಕರಾವಳಿ ಪ್ರದೇಶದಲ್ಲಿ ಜನರು ಸಾಂಸ್ಕೃತಿಕ ಮತ್ತು ಸಾಮರಸ್ಯದಿಂದ ಒಟ್ಟಿಗೆ ಕೂಡಿ ಬಾಳುತ್ತಿದ್ದಾರೆ. ಅಷ್ಟು ಮಾತ್ರವಲ್ಲದೇ ಅನೇಕ ಸಮುದಾಯದ ಜನರು ಇಲ್ಲಿ ನೆಲೆಸಿದ್ದಾರೆ. ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಮಾಜಿ ಅಧ್ಯಕ್ಷ ನಾಡೋಜ ಡಾ ಜಸ್ಟೀಸ್ ಎಸ್.ಆರ್ ನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಿ ಹೇಳಿದರು.
ಪೊಲೀಸ್ ಕಮಿಷನರ್ ಆರ್.ಹಿತೇಂದ್ರ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ತುಳಸಿ ಮದ್ದಿನೇನಿ, ಎಸ್.ಪಿ.ಶರಣಪ್ಪ, ವಕೀಲರ ಸಂಘದ ಅಧ್ಯಕ್ಷ ಚೆಂಗಪ್ಪ ಹಾಗೂ ಇತರರು ಉಪಸ್ಥಿತರಿದ್ದರು.