ಮಂಗಳೂರು,ಡಿ.12 : ನಗರದ ಹೊರವಲಯದ ವಳಚ್ಚಿಲ್ ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ನಡೆಯುತ್ತಿದ್ದ ಮರಳುಗಾರಿಕೆ ಮೇಲೆ ಪೊಲೀಸರು ದಾಳಿ ನಡೆಸಿದ್ದು ಕಾರ್ಮಿಕರನ್ನು ಬಂಧಿಸಿ ಘಟನೆ ಶುಕ್ರವಾರವ ಸಸುಕಿನ ವೇಳೆ ನಡೆದಿದೆ. , ಸಂಗ್ರಹಿಸಿಟ್ಟಿದ್ದ ಮರಳು ಮತ್ತು ಮರಳುಗಾರಿಕೆಗೆ ಬಳಕೆ ಮಾಡಲಾಗುತ್ತಿದ್ದ ಸಲಕರಣೆಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ತಹಶೀಲ್ದಾರ್ ನೇತೃತ್ವದ ಪೊಲೀಸ್ ತಂಡ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಕಾರ್ಮಿಕರನ್ನು ವಶ ಪಡಿಸಿಕೊಂಡು ಇದಕ್ಕೆ ಉಪಯೋಗಿಸುತ್ತಿದ್ದ ಮೀನುಗಾರಿಕಾ ದೋಣಿ, ಗ್ಯಾಸ್ ಸಿಲಿಂಡರ್ ಹಾಗೂ ಇನ್ನಿತರ ಸಲಕರಣೆಗಳನ್ನು ವಶಪಡಿಸಿಕೊಂಡಿದ್ದಾರೆ.
ಕಂಕನಾಡಿ ಠಾಣಾಧಿಕಾರಿ ಪ್ರಮೋದ್ ಪಿ. ಹಾಗೂ ಸಿಬ್ಬಂದಿ ಬಂದೋಬಸ್ತ್ ಮಾಡಲಾಗಿದೆ. . ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕಾರ್ಯಾಚರಣೆ ಮುಂದುವರಿ