ಮಂಗಳವಾರ,ಡಿ.22 : ಬಜ್ಪೆಯ ಸ್ವಾಮಿಲಪದವು ಎಂಬಲ್ಲಿ ಶನಿವಾರ ನಡೆದ ರಸ್ತೆ ಅಪಘಾತದಲ್ಲಿ ವಿಧಿವಶಳಾದ ವಿದ್ಯಾರ್ಥಿನಿ ನಯನ ಅವರ ಮನೆಗೆ ಸೋಮವಾರ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಜ್ಪೆ ಘಟಕದ ಪದಾಧಿಕಾರಿಗಳು ಭೇಟಿ ನೀಡಿ, ನಯನರ ಕುಟುಂಬಕ್ಕೆ ಧನ ಸಹಾಯ ಮಾಡಿದರು.
ಚಿಕ್ಕದಾದ ಮನೆಯಲ್ಲಿ ವಾಸ್ತವ್ಯ ಹೊಂದಿರುವ ನಯನ ಅವರ ಕುಟುಂಬದ ಅವಸ್ತೆಯು ಚಿಂತಾಜನವಾಗಿತ್ತು. ತಾಯಿ ಬೀಡಿ ಕಟ್ಟಿ ಮಗಳನ್ನು ಓದಿಸುತ್ತಿದ್ದರೆ, ತಂದೆ ಕೂಲಿ ಕೆಲಸ ಮಾಡಿ ಮನೆಗೆ ಆಸರೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಈ ಬಡ ಕುಟುಂಬಕ್ಕೆ ಧನ ಸಹಾಯ ಮಾಡಿ ಸಾಂತ್ವನ ಹೇಳುವ ಮೂಲಕ ಧೈರ್ಯ ತುಂಬುವ ಕಾರ್ಯವನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ವತಿಯಿಂದ ಮಾಡಲಾಯಿತು ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಜಿಲ್ಲಾ ಸಮಿತಿ ಸದಸ್ಯರಾದ ಬಾದ್ ಷಾ ತೋಡಾರ್ ಅವರು ಹೇಳಿದರು.
ಇಂದು ಅದೆಷ್ಟೋ ವಿದ್ಯಾರ್ಥಿಗಳು ಬೈಕ್ ಹಾಗು ಕಾರುಗಳನ್ನು ಲೈಸೆನ್ಸ್ ಇಲ್ಲದೆ ಚಲಾಯಿಸುತ್ತಿರುವುದನ್ನು ನಾವು ಕಾಣುತ್ತೇವೆ.ಇದು ಬಹಳ ಅಪಾಯಕಾರಿ. ಇಂಥ ಸಮಯದಲ್ಲಿ ಅವಘಡ ಸಂಭವಿಸಿದರೆ ಸಮಸೈ ಮತ್ತಷ್ಟು ಜಟಿಲವಾಗುತ್ತದೆ. ಅದ್ದರಿಂದ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಲ್ಲಿ ಈ ಬಗ್ಗೆ ಜಾಗ್ರತಿ ಮೂಡಿಸಬೇಕು ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಜ್ಪೆ ಡಿವಿಷನ್ ಸಮಿತಿ ಸಮಿತಿ ಈ ಮೂಲಕ ಆಗ್ರಹಿಸುತ್ತದೆ. ಮಾತ್ರವಲ್ಲದೇ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕೂಡ ಶಾಲಾ ಕಾಲೇಜ್ ಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಿದೆ ಎಂದು ಬಾದ್ ಷಾ ತೋಡಾರ್ ಈ ಸಂದರ್ಭದಲ್ಲಿ ಹೇಳಿದರು