ಬೆಂಗಳೂರು,ಜ.06 : ಆಹಾರದಲ್ಲಿ ವಿಷ ಸೇರಿಸಿ ಬೀದಿನಾಯಿಗಳನ್ನು ಹತ್ಯೆ ಮಾಡಿರುವ ಘಟನೆ ಜಗಜೀವನ್ರಾಮ್ ನಗರದಲ್ಲಿ ಸೋಮವಾರ ರಾತ್ರಿ ನಡೆದಿದ್ದು, ಮಂಗಳವಾರ ಬೆಳಕಿಗೆ ಬಂದಿದೆ.
ಈ ಪ್ರದೇಶದಲ್ಲಿ ಸುಮಾರು 10 ಶ್ವಾನಗಳು ಹಾಗೂ ಕಾಗೆಗಳು ಮೃತಪಟ್ಟಿವೆ.
ಬೀದಿ ಬದಿಯಲ್ಲಿ ಅಲ್ಲಲ್ಲಿ ಬಿದ್ದಿದ್ದ ನಾಯಿ, ಕಾಗೆಗಳನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈದ್-ಮಿಲಾದ್ ಹಬ್ಬ ಇದ್ದ ಹಿನ್ನೆಲೆಯಲ್ಲಿ ಯಾರೋ ದುಷ್ಕರ್ಮಿಗಳು ಬಿರಿಯಾನಿಯಲ್ಲಿ ವಿಷ ಸೇರಿಸಿ ಬಡಿಸಿದ್ದಾರೆ. ಈ ಸಂಬಂಧ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿ ಸತ್ಯ ಅವರು ಜಗಜೀವನ್ ರಾಮ್ ನಗರದಲ್ಲಿ ದೂರು ದಾಖಲಿಸಿದ್ದಾರೆ.
ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದ್ದು, ವರದಿ ಬಂದ ನಂತರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.