ಕನ್ನಡ ವಾರ್ತೆಗಳು

ರಾಜ್ಯಪಾಲ ವಜುಭಾಯಿ ವಾಲರಿಗೆ ಅದ್ದೂರಿ ಸ್ವಾಗತ

Pinterest LinkedIn Tumblr

vaju_bahi_airport_1

ಮಂಗಳೂರು, ಜ.8 : ಪುತ್ತೂರಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಸಲುವಾಗಿ ಆಗಮಿಸಿದ ಕರ್ನಾಟಕದ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ದ.ಕ. ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಲಾಯಿತು.

vaju_bahi_airport_2

ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ನೇತೃತ್ವದಲ್ಲಿ ರಾಜ್ಯಪಾಲ ವಜುಭಾಯಿ ಅವರನ್ನು ಬರಮಾಡಿಕೊಂಡು ವಿಮಾನ ನಿಲ್ದಾಣದ ಹೊರ ಆವರಣದಲ್ಲಿ ಗೌರವ ರಕ್ಷೆ ನೀಡಲಾಯಿತು. ಶ್ವೇತ ವರ್ಣದ ಶರ್ಟ್ ಹಾಗೂ ಪ್ಯಾಂಟ್‌ನ ಮೇಲೆ ನೀಲಿ ಬಣ್ಣದ ಓವರ್‌ಕೋಟ್ ಧರಿಸಿದ್ದ ರಾಜ್ಯಪಾಲ ವಜುಭಾಯಿ ವಿಮಾನ ನಿಲ್ದಾಣದಿಂದ ವಾಹನದ ಮೂಲಕ ಪುತ್ತೂರಿಗೆ ತೆರಳಿದರು.

vaju_bahi_airport_3

ವಿಮಾನ ನಿಲ್ದಾಣದಲ್ಲಿ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್, ಮಂಗಳೂರು ಪೊಲೀಸ್ ಆಯುಕ್ತ ಮುರುಗನ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶರಣಪ್ಪ ಮೊದಲಾದವರು ಉಪಸ್ಥಿತರಿದ್ದರು.

Write A Comment