ಕನ್ನಡ ವಾರ್ತೆಗಳು

ಯಕ್ಷಗಾನ ಕಲಾವಿದ ರಮೇಶ ಗೌಡ ವಿಧಿವಶ

Pinterest LinkedIn Tumblr

ramesh_gouda_passes_awaya

ಮಂಗಳೂರು, ಜ.13: ತೆಂಕುತಿಟ್ಟಿನ ಯಕ್ಷಗಾನ ರಂಗ ಉದಯೋನ್ಮುಖ ಯಕ್ಷಗಾನ ಕಲಾವಿದನೋರ್ವನನ್ನು ಕಳೆದುಕೊಂಡಿದೆ. ಖ್ಯಾತ ಯಕ್ಷಗಾನ ಕಲಾವಿದ ಬೆಳಾಲು ರಮೇಶ್ ಗೌಡ ನಿಧನರಾಗಿದ್ದಾರೆ. ಯಕ್ಷಗಾನದಲ್ಲಿ ಪ್ರಮುಖವಾಗಿ ಸ್ತ್ರೀವೇಷಗಳನ್ನು ನಿರ್ವಹಿಸುತ್ತಿದ್ದ ರಮೇಶ್ ಅವರ ದೇವಿಪಾತ್ರ ವಿಶ್ವವಿಖ್ಯಾತಿಯನ್ನುಗಳಿಸಿತ್ತು. ದೇವಿ ಮಹಾತ್ಮೆ ಯಕ್ಷಗಾನ ಪ್ರಸಂಗದಲ್ಲಿ ದೇವಿಯ ಪಾತ್ರವನ್ನು ಮನೋಜ್ಞವಾಗಿ ಅಭಿನಯಿಸುವ ಮೂಲಕ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿದ್ದರು.

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಮೇಶ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಂಜೆ ವೇಳೆಗೆ ನಿಧನರಾಗಿದ್ದಾರೆ. ಇವರ ನಿಧನಕ್ಕೆ ಯಕ್ಷಗಾನ ರಂಗದ ಪ್ರಮುಖ ಕಲಾವಿದರು, ಹಿತೈಷಿಗಳು ಕಂಬನಿ ಮಿಡಿದಿದ್ದಾರೆ

Write A Comment