ಕನ್ನಡ ವಾರ್ತೆಗಳು

ಬಂಟ್ವಾಳ : ಸೂರಿಕುಮೇರು ಮಸೀದಿಗೆ ಕಲ್ಲೆಸೆತ

Pinterest LinkedIn Tumblr

ಬಂಟ್ವಾಳ : ಕಿಡಿಗೇಡಿಗಳ ತಂಡವೊಂದು ಮಸೀದಿಗೆ ಕಲ್ಲೆಸೆದು ಹಾನಿಗೊಳಿಸಿದ ಘಟನೆ ಶುಕ್ರವಾರ ಮಧ್ಯರಾತ್ರಿ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ನಡೆದಿದೆ.

ಸೂರಿಕುಮೇರು ಬದ್ರಿಯಾ ಜುಮಾ ಮಸೀದಿ ಕಿಡಿಗೇಡಿಗಳಿಂದ ಹಾನಿಯಾಗಿದ್ದು, ಬಳಿಕ ದುಷ್ಕರ್ಮಿಗಳ ತಂಡ ಮಸೀದಿಯ ಬಳಿಯಿದ್ದ ಬ್ಯಾನರ್ ಅನ್ನು ಹರಿದು ಹಾಕಿದೆ ಎಂದು ಮಸೀದಿಯ ಆಡಳಿತ ಸಮಿತಿಯ ಅಧ್ಯಕ್ಷ ಹಾಜಿ ಯೂಸ್ು ವಿಟ್ಲ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಘಟನಾ ವಿಷಯ ತಿಳಿಯುತ್ತಿದ್ದಂತೆ ಮಸೀದಿಯಲ್ಲಿ ಜನ ಜಮಾಯಿಸಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು. ಈ ಬಗ್ಗೆ ಮಾಹಿತಿ ಪಡೆದ ಬಂಟ್ವಾಳ ಎಎಸ್ಪಿ ರಾಹುಲ್ ಕುಮಾರ್, ವೃತ್ತ ನಿರೀಕ್ಷಕ ಬೆಳ್ಳಿಯಪ್ಪ, ವಿಟ್ಲ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಘವೇಂದ್ರ ಟಿ.ಆರ್ ಹಾಗೂ ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ವಿಟ್ಲ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದಾರೆ. ಮನೆಗೆ ಕಲ್ಲು: ಸೂರಿಕುಮೇರು ಸಮೀಪದ ನಿವಾಸಿ ಮೋನಕಾ ಎಂಬವರ ಮನೆಗೆ ಕಲ್ಲು ಎಸೆದು ಮನೆಯ ಕಿಟಕಿ ಗಾಜನ್ನು ಪುಡಿ ಮಾಡಲಾಗಿದೆ ಎಂದು ಆರೋಪಿಸಿ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Write A Comment