ಮಂಗಳೂರು,ಫೆ.03 : ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳವಾರ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ಕೇಂದ್ರ ಸರಕಾದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ವಿದೇಶಿ ಕಂಪೆನಿಗಳಿಗೆ ರೈತರ ಭೂಮಿಯನ್ನು ನೀಡುವ ಮಸೂದೆಯ ಮೂಲಕ ಕೇಂದ್ರ ಸರಕಾರ ರೈತ ದಮನ ನೀತಿಯನ್ನು ಅನುಸರಿಸುತ್ತಿದೆ. ಈ ಚುನಾವಣೆ ಸಮಯದಲ್ಲಿ ರೈತ ಪರವಾಗಿರುತ್ತೇವೆ ಎಂಬ ಸುಳ್ಳು ಭರವಸೆಯನ್ನು ನೀಡಿದ ನಮ್ಮ ಜಿಲ್ಲೆಯ ಸಂಸದರು ನಮ್ಮೊಂದಿಗೆ ಕೈ ಜೋಡಿಸಲಿ ಎಂದು ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಯುವ ಕಾಂಗ್ರೆಸ್ ನ ಅಧ್ಯಕ್ಷ ಮಿಥುನ್ ರೈ ಅವರು ಹೇಳಿದರು.
ಕೇಂದ್ರ ಸರಕಾರದ ವಿರುದ್ದ ಇಂದು ರಾಜ್ಯಾದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದೆ ಇದ್ದಲ್ಲಿ ಉಗ್ರ ಹೋರಾಟ ನಡೆಸುತ್ತೇವೆ ಎಂದರು. ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯದರ್ಶಿ ಅಬ್ದುಲ್ ಅಝೀಯ್ ಮೊದಲಾದವರು ಉಪಸ್ಥಿತರಿದ್ದರು.