ಕನ್ನಡ ವಾರ್ತೆಗಳು

ಪ್ರೊ.ಎಂ.ಬಿ.ಪುರಾಣಿಕ್ ಅವರಿಗೆ ಎ.ಶಾಮರಾವ್ ಸ್ಮಾರಕ ಪ್ರಶಸ್ತಿ

Pinterest LinkedIn Tumblr

M.B.Puranik_awsrd

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಶೈಕ್ಷಣಿಕ, ಸಾಮಾಜಿಕ, ಆರೋಗ್ಯ ಕ್ಷೇತ್ರಗಳಲ್ಲಿ ಗಮನಾರ್ಹ ಮತ್ತು ಕ್ರಾಂತಿಕಾರಿಕ ಬದಲಾವಣೆಯನ್ನು ತರುವಲ್ಲಿ ಯಶಸ್ವಿಯಾದ ಅಪರೂಪದ ಸಾಧಕರನ್ನು ಗುರುತಿಸಿ ಗೌರವಿಸುವ ಧ್ಯೇಯ ಹೊಂದಿರುವ ಎ.ಶಾಮರಾವ್ ಪ್ರತಿಷ್ಠಾನ ಮಂಗಳೂರಿನ ಶಾರದ ಸಮೂಹ ಸಂಸ್ಥೆಯ ಅಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್ ಅವರನ್ನು 2015ರ ಎ.ಶಾಮರಾವ್ ಸ್ಮಾರಕ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಅವರು ದಕ್ಷಿಣ ಕನ್ನಡದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ನೀಡಿದ ಅಪಾರ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ವಳಚ್ಚಿಲ್‌ನ ಶ್ರೀನಿವಾಸ್ ಶೈಕ್ಷಣಿಕ ಆವರಣದಲ್ಲಿ ಫೆ.14ರಂದು ಪ್ರತಿಷ್ಠಾನದ ಅಧ್ಯಕ್ಷ ಎ.ರಾಘವೇಂದ್ರ ರಾವ್ ಅಧ್ಯಕ್ಷತೆಯಲ್ಲಿ ನಡೆಯುವ ಎ.ಶಾಮರಾವ್ ಪ್ರತಿಷ್ಠಾನದ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಯೋಜಕ ಡಾ.ಎ.ಆರ್.ಶಬರಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Write A Comment