ಕುಂದಾಪುರ: ಶಿವಮೊಗ್ಗದಲ್ಲಿ ಸಂಭವಿಸಿದ ಗಲಭೆಗೆ ಸಂಬಂಧಿಸಿದಂತೆ ಕುಂದಾಪುರ ನಗರದ ಎಂ. ಕೋಡಿಯ ಹನೀಫ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಶಿವಮೊಗ್ಗ ಮತ್ತು ಕುಂದಾಪುರ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ವಿಚಾರಣೆಗೊಳಪಡಿಸಿದೆ.
ಗಲಭೆ ಸಂದರ್ಭದಲ್ಲಿ ಕುಂದಾಪುರ ಮೂಲದ ಕಾರು ಜಖಂಗೊಂಡಿರುವ ಹಿನ್ನೆಲೆಯಲ್ಲಿ ತನಿಖೆಗೆ ಮುಂದಾದ ಪೊಲೀಸರು ಕೋಡಿಗೆ ಶುಕ್ರವಾರ ರಾತ್ರಿ ಆಗಮಿಸಿ ಹಲವರನ್ನು ವಶಕ್ಕೆ ತೆಗೆದುಕೊಂಡಿದ್ದರು.