ಮಂಗಳೂರು, ಫೆ. 25 : ಮಂಗಳೂರಿನ ಕೋಟೆಕಾರು ಪ್ರದೇಶದಲ್ಲಿರುವ ಸಂತ ಜೋಸೆಫ್ ವಾಜ್ ಪ್ರಾರ್ಥನಾ ಮಂದಿರದ ಮೇಲೆ ಮಂಗಳವಾರ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಮಂದಿರದ ಕಿಟಕಿ ಗಾಜುಗಳು ಪುಡಿಯಾಗಿದ್ದು, ಮೇರಿ ಮಾತೆ ವಿಗ್ರಹಕ್ಕೆ ಹಾನಿ ಉಂಟಾಗಿದೆ. ಇದು ನಿರ್ಜನ ಪ್ರದೇಶವಾಗಿದ್ದರಿಂದ ಕಲ್ಲು ತೂರಾಟ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಉಳ್ಳಾಲ ಪೊಲೀಸರು ಮತ್ತು ಆರೋಗ್ಯ ಸಚಿವ ಯು.ಟಿ.ಖಾದರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.