ಮಂಗಳೂರು,ಫೆ.26 : ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಕ್ಕೊಳಪಟ್ಟ ಫಾರ್ಮಸಿ, ನರ್ಸಿಂಗ್, ಫಿಸಿಯೋಥೆರಪಿ, ಹೊಟೇಲ್ ಉದ್ಯಮಾಡಳಿತ, ಆಂತರಿಕ ವಿನ್ಯಾಸ, ವಸ್ತ್ರ ವಿನ್ಯಾಸ, ಸಮಾಜ ಸೇವಾ ಕಾರ್ಯ, ಮಾಹಿತಿ ವಿಜ್ಞಾನ, ಉದ್ಯಮ ಮತ್ತು ವಾಣಿಜ್ಯ ಆಡಳಿತ ಶಿಕ್ಷಣ ಮಹಾವಿದ್ಯಾಲಯಗಳ “ವಾರ್ಷಿಕೋತ್ಸವ (ವರ್ದಂತ್ಯೋತ್ಸವ) ಸಮಾರಂಭ”ವು ಮಾರ್ಚ್ 02. ರಂದು ಬೆಳಗ್ಗೆ 10 ಗಂಟೆಗೆ ಲೊಯೊಲಾ ಸಭಾಂಗಣದಲ್ಲಿ ಜರಗಲಿರುವುದು.
ಶಾಸಕ ಜೆ.ಆರ್. ಲೋಬೊ ಸಮಾರಂಭದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಶೈಕ್ಷಣಿಕ ಮತ್ತು ಕ್ರೀಡಾ ಸ್ಪರ್ಧಾಕೂಟದ ಸಾಧಕರಿಗೆ ಬಹುಮಾನವನ್ನು ವಿತರಿಸಲಿರುವರು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ (ಮೌಲ್ಯನಿರ್ಧಾರಣ) ಪ್ರೊ| ಡಿ. ನಾರಾಯಣ ರವರು ಗೌರವ ಅತಿಥಿಯಾಗಿ ಪಾಲ್ಗೊಳ್ಳಲಿರುವರು.
ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಎ. ಸದಾನಂದ ಶೆಟ್ಟಿಯವರು ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು. ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಶ್ರೀ ನಿಧೀಶ್ ಶೆಟ್ಟಿ, ಕಾರ್ಯದರ್ಶಿ ಶ್ರೀಮತಿ ಮೈನಾ ಶೆಟ್ಟಿ, ಕೋಶಾಧಿಕಾರಿ ಶ್ರೀಮತಿ ಪ್ರಿಯಾಂಕ ಶೆಟ್ಟಿ ಹಾಗೂ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿರುವರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ಜರಗಲಿರುವುದು.