ವರದಿ / ಚಿತ್ರ : ಸತೀಶ್ ಕಾಪಿಕಾಡ್
ಮಂಗಳೂರು,ಮಾ.1 : ವಿಶ್ವ ಹಿಂದೂ ಪರಿಷತ್ ಸಂಘಟನೆಯ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಮಂಗಳೂರಿನ ಕೇಂದ್ರ ಮೈದಾನದಲ್ಲಿ ಹಮ್ಮಿಕೊಂಡಿರುವ ಬೃಹತ್ ಹಿಂದೂ ಸಮಾವೇಶ ಅಂಗವಾಗಿ ರವಿವಾರ ಮಧ್ಯಾಹ್ನ ನಗರದ ಅಂಬೇಡ್ಕರ್ (ಜ್ಯೋತಿ) ವೃತ್ತದಿಂದ ಕೇಂದ್ರ ಮೈದಾನಿಗೆ ಆಕರ್ಷಕ ಶೋಭಾ ಯಾತ್ರೆ ನಡೆಯಿತು.
ಹಿಂದೂ ಸಮಾಜೋತ್ಸವ ಸಮಿತಿ ಗೌರವ ಅಧ್ಯಕ್ಷ ಎಸ್.ಗಣೇಶ್ ರಾವ್ ಹಾಗೂ ಅಧ್ಯಕ್ಷ ವಿಜಯ ವಿಠಲನಾಥ ಶೆಟ್ಟಿ ಅವರು ಆಕರ್ಷಕ ಶೋಭಾ ಯಾತ್ರೆಗೆ ಚಾಲನೆ ನೀಡಿದರು. ಹಿಂದೂ ಸಮಾಜೋತ್ಸವ ಸಮಿತಿಯ ಪದಾಧಿಕಾರಿಗಳು, ವಿಶ್ವ ಹಿಂದೂ ಪರಿಷತ್ನ ಮುಖಂಡ ಎಂ.ಬಿ ಪುರಾಣಿಕ್, ಬಜರಂಗದಳದ ಸಂಚಾಲಕ ಶರಣ್ ಪಂಪವೆಲ್ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು. ವಿವಿಧ ಮಠಾಧೀಶರು ಮೆರವಣಿಗೆಯಲ್ಲಿ ಪಾಲ್ಗೊಂಡು ಮಾರ್ಗದರ್ಶನ ನೀಡಿದರು.
ಮೆರವಣಿಗೆಯಲ್ಲಿ ಲಕ್ಷಾಂತರ ಮಂದಿ ಪಾಲ್ಗೊಂಡಿದ್ದರು. ಸ್ತಬ್ದ ಚಿತ್ರ ವಾಹನಗಳು, ಚೆಂಡೆ ವಾದನ, ಭಜನಾ ತಂಡಗಳು, ಸಾಂಸ್ಕೃತಿಕ ಮತ್ತು ರಾಷ್ಟ್ರ ಪ್ರೇಮವನ್ನು ಬಿಂಬಿಸುವ ವೇಷ ಭೂಷಣಗಳು ಪ್ರಮುಖ ಆಕರ್ಷಣೆಯಾಗಿದ್ದವು.
ಹೆಚ್ಚಿನ ಚಿತ್ರ ನಿರೀಕ್ಷಿಸಿ…