ಮಂಗಳೂರು,ಮಾರ್ಚ್.03: ನಗರದ ಯುನಿಟಿ ಆಸ್ಪತ್ರೆ ತನ್ನ ಅಪರೂಪದ ಶಸ್ತ್ರಚಿಕಿತ್ಸೆಯೊಂದನ್ನು ಯಶಸ್ವಿಯಾಗಿ ಮಾಡುವ ಮೂಲಕ ಸಾಧನೆ ಮಾಡಿದೆ ಎಂದು ಆಸ್ಪತ್ರೆಯ ವೈದ್ಯ ಜಲಾಲುದ್ದೀನ್ ಅಕ್ಬರ್ ಅವರು ಹೇಳಿದ್ದಾರೆ. ನಗರದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಬಲಕೈ ಮೂಳೆಯ ಕ್ಯಾನ್ಸರ್ ನಿಂದ ಬಳಲುತ್ತಿದ್ದ 10 ವರ್ಷದ ಬಾಲಕಿಗೆ ಶಸ್ತ್ರಚಿಕಿತ್ಸೆ ಮೂಲಕ ಕೈಯನ್ನು ಕತ್ತರಿಸುವ ಬದಲು ಬಾಲಕಿಯ ಕೈಯನ್ನು ಉಳಿಸುವಲ್ಲಿ ಯಶಸ್ವಿಯಾಗಿದೆ ಎಂದರು.
ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿದರೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮೂಲಕ ಗುಣಪಡಿಸಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
ಸುದ್ದಿಗೋಷ್ಟಿಯಲ್ಲಿ ಡಾ. ಇಮ್ತಿಯಾಝ್, ಅಜ್ಮಲ್ ಎಂ ಹಬೇಬ್ ಮೊದಲಾದವರು ಉಪಸ್ಥಿತರಿದ್ದರು.