ಮಂಗಳೂರು,ಎ.16 : ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಸಮಾಲೋಚನಾ ಸಭೆಯು ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಎ.ಬಿ ಇಬ್ರಾಹಿಂ ನೇತೃತ್ವದಲ್ಲಿ ನಡೆಯಿತು.
ಬಾಲಕಾರ್ಮಿಕರ ರಕ್ಷಣೆಯ ಬಗ್ಗೆ ಯಾವ ರೀತಿಯ ಕ್ರಮ ಕೈಗೊಳ್ಳಬಹುದು ಎಂಬ ಚರ್ಚೆಯನ್ನು ಈ ಸಭೆಯಲ್ಲಿ ನಡೆಸಲಾಗಿದ್ದು, ಬಾಲಕಾರ್ಮಿಕರನ್ನು ಬಳಸಿಕೊಂಡು, ಪ್ರಕರಣಗಳು ದಾಖಲಾದ ಮಾಲೀಕರಿಂದ ನಿಗದಿತ ದಂಡವನ್ನು ಕೂಡಲೇ ವಸೂಲಿ ಮಾಡುವಂತೆ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಇದರ ಜೊತೆಗೆ ಬಾಲಕಾರ್ಮಿಕರನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಇನ್ನಷ್ಟು ಕಾರ್ಯಾಚರಣೆಗಳನ್ನು ಕೈಗೊಳ್ಳಬೇಕು. ಬಾಲಕಾರ್ಮಿಕರ ಕುರಿತಂತೆ ಮತ್ತೊಮ್ಮೆ ಸಮಗ್ರ ಸಮೀಕ್ಷೆ ನಡೆಸಬೇಕು. ತಾಲೂಕು ಮಟ್ಟದಲ್ಲಿ ಬಾಲಕಾರ್ಮಿಕತನ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಆದೇಶ ನೀಡಿದ್ರು. ಸಭೆಯಲ್ಲಿ ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತ ನಾಗೇಶ್ ಕುಮಾರ್, ಉಪ ಆಯುಕ್ತರಾದ ಅಶೋಕ್ ಕುಮಾರ್, ಬಸವರಾಜ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.