ಮಂಗಳೂರು,ಎಪ್ರಿಲ್.25 : ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದ.ಕ. ಹಾಗೂ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇವುಗಳ ಸಹಯೋಗದೊಂದಿಗೆ ಶನಿವಾರ ಭಗೀರಥ ಜಯಂತಿ ಆಚರಣೆಯು ಉರ್ವಸ್ಟೋರ್ನಲ್ಲಿರುವ ದ.ಕ. ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. ದ.ಕ ಜಿಲ್ಲಾ ಕನ್ನಡ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪಿ.ಐ ಶ್ರೀವಿಧ್ಯಾ, ದ.ಕ ಜಿಲ್ಲಾಧಿಕಾರಿ ಎ.ಬಿ ಇಬ್ರಾಹಿಂ, ಉಪಸ್ಥಿತರಿದ್ದರು
ಹಿರಿಯ ಸಾಹಿತಿ ವಿದ್ವಾಂಸ ಪೊಳಲಿ ನಿತ್ಯಾನಂದ ಕಾರಂತ ಭಗೀರಥ ಜಯಂತಿ ಸಂದೇಶ ನೀಡಿದ್ದರು.ದ ಕ ಜಿಲ್ಲೆಯ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಹಾಸ ರೈ ಬಿ ಸ್ವಾಗತಿಸಿದರು.