ಮಂಗಳೂರು,ಎಪ್ರಿಲ್ .29 : ಕರ್ನಾಟಕದಲ್ಲಿ ಅದರಲ್ಲೂ ಮಂಗಳೂರಲ್ಲಿ ಕ್ರೀಡಾಕೂಟ ನಡೆಸುವುದಕ್ಕೆ ಅವಕಾಶಕೊಟ್ಟಿರುವುದಕ್ಕೆ ಹಾಗೂ ಕ್ರೀಡಾಂಗಣವನ್ನು ಅಲ್ಪ ಅವಧಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಕೂಟ ನಡೆಸುವುದಕ್ಕೆ ಆಸ್ಪದವಾಗುವಂತೆ ಜಿಲ್ಲಾಡಳಿತ ಹಗಲೂ ರಾತ್ರಿ ಶ್ರಮಿಸಿದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಂಗಳಾ ಕ್ರೀಡಾಂಗಣದಲ್ಲಿ ಏ.30ರಿಂದ ಆರಂಭಗೊಳ್ಳಲಿರುವ ರಾಷ್ಟ್ರೀಯ ಫೆಡರೇಶನ್ ಕಪ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ಸಿದ್ಧತೆಗಳ ಬಗ್ಗೆ ಬುಧವಾರ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಸದ್ಯ ಕಾಂಗ್ರೆಸ್ ಪಕ್ಷದ ಗಮನ ಮುಂದೆ ನಡೆಯಲಿರುವ ಗ್ರಾಮ ಪಂಚಾಯತ್ ಚುನಾವಣೆ ಕಡೆಗಿದೆ. ಪಕ್ಷದ ಚಿಹ್ನೆಯಡಿ ಈ ಚುನಾವಣೆ ನಡೆಯದಿದ್ದರೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಪಕ್ಷಕ್ಕೆ ಭದ್ರ ತಳಪಾಯ ಹಾಕಬೇಕಿದೆ. ಈ ದಿಸೆಯಲ್ಲಿ ಸದ್ಯ ಸಚಿವ ಸಂಪುಟದ ವಿಸ್ತರಣೆ ಇಲ್ಲ ಎಂದರು. ತನ್ನನ್ನು ಸಚಿವ ಸಂಪುಟಕ್ಕೆ ಸೇರಿಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ತೀರ್ಮಾನ ಅಂತಿಮ ಎಂದು ಹೇಳಿದರು.
ಪಂಚಾಯತ್ ಚುನಾವಣೆ ಹಿನ್ನೆಲೆ ಪಕ್ಷದ ಎಲ್ಲಾ ಬ್ಲಾಕ್, ವಾರ್ಡ್, ಜಿಲ್ಲಾ ಸಮಿತಿಗಳಿಗೆ ಮುಂದಿನ 15 ದಿನದೊಳಗೆ ಚುನಾವಣೆ ನಡೆಯಲಿದೆ. ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಗೂ ಹೊಸ ಅಧ್ಯಕ್ಷರು ಬರಲಿದ್ದಾರೆ. ಸೆಪ್ಟೆಂಬರ್ ತಿಂಗಳಿನಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಗೂ ಹೊಸ ಅಧ್ಯಕ್ಷರ ನೇಮಕವಾಗಲಿದೆ ಎಂದರು.