ವರದಿ / ಚಿತ್ರ : ಸತೀಶ್ ಕಾಪಿಕಾಡ್
ಮಂಗಳೂರು : ಬೈಕ್ ಸ್ಕಿಡ್ ಆಗಿ ಪಕ್ಕದ ಚರಂಡಿಗೆ ಬಿದ್ದ ಪರಿಣಾಮ ಇಬ್ಬರು ಯುವಕರು ಗಂಭೀರಾ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಗುರುವಾರ ಸಂಜೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಸಮೀಪದ ಬಿಜೈಗೆ ಹೋಗುವ ( ಟಾಟಾ ಮೋಟಾರ್ಸ್ ಸಮೀಪ) ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.
ಗಾಯಾಳುಗಳನ್ನು ಬಿಗ್ ಬಜಾರ್ ಸಂಸ್ಥೆಯ ಉದ್ಯೋಗಿಗಳೆಂದು ಗುರುತಿಸಲಾಗಿದೆ.
ಈ ಇಬ್ಬರು ಯುವಕರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಕಡೆಯಿಂದ ಬಿಜೈ ಕಡೆ ಹೋಗುತ್ತಿದ್ದ ಸಂದರ್ಭ ಬಿಜೈ ಮುಖ್ಯ ರಸ್ತೆಯ ಟಾಟಾ ಮೋಟಾರ್ಸ್ ಕಟ್ಟಡದ ಸ್ವಲ್ಪ ಮುಂದೆ ಸಾಗುವಾಗ ಎದುರಿನಿಂದ ನಿಧಾನವಾಗಿ ಚಲಿಸುತ್ತಿದ್ದ ಕಾರನ್ನು ಓವರ್ ಟೇಕ್ ಮಾಡುವ ಹಿನ್ನೆಲೆಯಲ್ಲಿ ಕಾರಿನ ಎಡ ಭಾಗದಿಂದ ಚಲಿಸಿದಾಗ ಬೈಕ್ ಸ್ಕಿಡ್ ಆಗಿ ರಸ್ತೆ ಪಕ್ಕದಲ್ಲಿ ಚರಂಡಿಗೆ ನಿರ್ಮಿಸಲಾದ ತಡೆಗೋಡೆಗೆ ಡಿಕ್ಕಿ ಹೊಡೆದು ಪಕ್ಕದ ಚರಂಡಿಗೆ ಬಿದ್ದಿದೆ. ಈ ಸಂದರ್ಭದಲ್ಲಿ ಅಲ್ಲೆ ಪಕ್ಕದಲ್ಲಿದ್ದ ವಿದ್ಯುತ್ ಕಂಬ ಹಾಗೂ ತಡೆಗೊಡೆ ಮುಖ ಹಾಗೂ ತಲೆಗೆ ತಾಗಿ ಇಬ್ಬರೂ ತೀವೃವಾಗಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡ ಇಬ್ಬರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಪಡಿಸಲಾಗಿದೆ.ಬರ್ಕೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.