ಕನ್ನಡ ವಾರ್ತೆಗಳು

ಉತ್ತಮ ಸೇವೆಗೆ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ಕ್ರಾಸ್ ಪ್ರಶಸ್ತಿ

Pinterest LinkedIn Tumblr

red_cross_awrd

ಮಂಗಳೂರು,ಮೇ 12 : ದಕ್ಷಿಣ ಕನ್ನಡ ಜಿಲ್ಲೆ ರೆಡ್‌ಕ್ರಾಸ್ ಸಂಘ 2013-14  ರ ಸಾಲಿನಲ್ಲಿ ಉತ್ತಮ ಸೇವೆ ಮಾಡಿದ್ದಕ್ಕಾಗಿ ಕರ್ನಾಟಕ ರಾಜ್ಯ ರಾಜ್ಯಪಾಲರಾದ ಶ್ರೀ ವಾಜುಭಾಯಿ ರುಡಾವಾಲ ಅವರು ರನ್ನರ್ ಅಪ್ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರಿಗೆ ಇತ್ತಿಚೇಗೆ ರಾಜಭವನದಲ್ಲಿ ಜರುಗಿದ ಭಾರತೀಯ ರೆಡ್‌ಕ್ರಾಸ್ ಸಂಘದ ವಾರ್ಷಿಕ ಸಮಾರಂಭದಲ್ಲಿ ನೀಡಿದರು.

ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ರೆಡ್‌ಕ್ರಾಸ್ ಸಂಘದ ಶಾಖೆಯು 2013-14ನೇ ಸಾಲಿನಲ್ಲಿ ಜಿಲ್ಲೆಯ ಅತ್ಯಂತ ಕುಗ್ರಾಮವಾದ ಬಂಜಾರುಮಲೆ(ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ 34ಕಿ.ಮಿ ದೂರ) ಇಲ್ಲಿ ಆರೋಗ್ಯ ಶಿಬಿರವನ್ನು ಆಯೋಜಿಸುವ ಮೂಲಕ ಆ ಭಾಗದ ಜನರಿಗೆ ಆರೋಗ್ಯ ಭಾಗ್ಯ ಒದಗಿಸಿದ ಬಗ್ಗೆ ಹಾಗೂ ಇನ್ನೂ ಅನೇಕ ಜನೋಪಯೋಗಿ ಕಾರ್ಯಗಳನ್ನು ನೆರವೇರಿಸಿರುವ ಕುರಿತು 2013-14  ನೇ ಸಾಲಿಗೆ ರನ್ನರ್ ಅಪ್ ಪ್ರಶಸ್ತಿಯನ್ನು ನೀಡಲಾಗಿದೆ.

ಭಾರತೀಯ ರೆಡ್‌ಕ್ರಾಸ್ ಸಂಘದ ದಕ್ಷಿಣಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಪ್ರಭಾಕರ ಶ್ರೀಯಾನ್ ,ಉಪಾಧ್ಯಕ್ಷ ರೊನಾಲ್ಡ್ ಅನಿಲ್ ಫರ್ನಾಂಡೀಸ್, ಕಾರ್ಯದರ್ಶಿ ಕೆ.ವಿ.ನಾಗರಾಜ್ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

Write A Comment