ಮಂಗಳೂರು,ಮೇ.15 : ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಜೆ. ಆರ್. ಲೋಬೊರವರ ಶಿಫಾರಸಿನ ಮೇರೆಗೆ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ಸೂಟರ್ಪೇಟೆ 1ನೇ ಮತ್ತು 2ನೇ ಅಡ್ಡರಸ್ತೆ ಹಾಗೂ 1 ನೇ ಎಡರಸ್ತೆ ಕಾಂಕ್ರೀಟಿಕರಣದ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶುಕ್ರವಾರ ನೆರವೇರಿಸಿದರು.25 ಲಕ್ಷ ರೂಪಾಯಿ ವೆಚ್ಚದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಜೆ.ಆರ್.ಲೋಬೊರಿಂದ ಗುದ್ದಲಿ ಪೂಜೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕರು, ಕ್ಷೇತ್ರದಲ್ಲಿರುವ ಮುಖ್ಯ ರಸ್ತೆಗಳ ಆಭಿವೃದ್ಧಿಯ ಜೊತೆಜೊತೆಗೆ ಓಳರಸ್ತೆಗಳ ಕಾಂಕ್ರೀಟಿಕರಕ್ಕೆ ಹೆಚ್ಚು ಅದ್ಯತೆ ನೀಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ, ಸ್ಥಳೀಯ ಕಾರ್ಪೋರೆಟರ್ ಮತ್ತು ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರದ ಜೆಸಿಂತಾ ವಿಜಯ ಆಲ್ಪ್ರೇಡ್, ಕಾರ್ಪೋರೆಟರ್ ಆಪ್ಪಿ, ಮುಖಂಡರಾದ ಟಿ.ಕೆ. ಸುಧೀರ್, ರಾಮನಂದ್ ಪೂಜಾರಿ ಮತ್ತಿತ್ತರು ಉಪಸ್ಥಿತರಿದ್ದರು.