ಕನ್ನಡ ವಾರ್ತೆಗಳು

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಸಿಐಟಿಯು ವತಿಯಿಂದ ಪ್ರತಿಭಟನೆ.

Pinterest LinkedIn Tumblr

CITU_protest_photo_1ಮಂಗಳೂರು,ಮೇ.26 : ಕೇಂದ್ರ ಸರ್ಕಾರವು ಕೈಗಾರಿಕೆ ಮಾಲಿಕರಿಗೆ ಹಾಗೂ ಶ್ರೀಮಂತ ವರ್ಗದ ಜನರ ಪರವಾಗಿ ಆಡಳಿತ ಮಾಡುತ್ತಿದೆ. ಅಲ್ಲದೆ ಅನೇಕ ಕಾರ್ಮಿಕ ಕಾಯ್ದೆಯನ್ನು ತಿದ್ದುಪಡಿ ಮಾಡಿ ರದ್ದು ಪಡಿಸುವ ಮೂಲಕ ಕಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ, ಎಂದು ಸಿಐಟಿಯು ನ ಜಿಲ್ಲಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಪ್ರತಿಭಟಕಾರರನ್ನು ಉದ್ದೇಶಿಸಿ ಮಾತನಾಡಿ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪ್ರತಿಕೃತಿಯನ್ನು ದಹನ ಮಾಡಿದರು.

CITU_protest_photo_2 CITU_protest_photo_3 CITU_protest_photo_4 CITU_protest_photo_5

ಪ್ರತಿಭಟನೆಯಲ್ಲಿ ಸಿಐಟಿಯು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತ ಆಚಾರ್ಯ, ನಗರ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್, ಯೋಗೀಶ್ ಜಪ್ಪಿನಮೊಗರು, ಸಂತೋಷ್ ಕುಮಾರ್ ಮತ್ತಿತ್ತರರು ಉಪಸ್ಥಿತರಿದ್ದರು

Write A Comment