ಉಡುಪಿ: ಭಾರೀ ಕುತೂಹಲ ಕೆರಳಿಸಿರುವ ಶುಕ್ರವಾರ ನಡೆಯಲಿರುವ ಗ್ರಾಮ ಪಂಚಾಯತ್ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಮಾ. 29ರಂದು ಮತದಾರರ ತೀರ್ಪು ಪ್ರಕಟವಾಗಲಿದೆ. ಉಡುಪಿ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ನಡೆಸುವ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಂಡಿದ್ದು, ಪೊಲೀಸ್ ಇಲಾಖೆಯು ಎಲ್ಲೆಡೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕೈಗೊಂಡಿದೆ.
ಕುಂದಾಪುರ ತಾಲೂಕಿನ 62 ಗ್ರಾ.ಪಂ.ಗಳಿಗೆ ಮೇ.29ರಂದು ನಡೆ ಯಲಿರುವ ಚುನಾವಣೆಗೆ ಸಂಬಂಧಿಸಿದಂತೆ 142 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು, ಉಳಿದಿರುವ 733 ಸ್ಥಾನಗಳಿಗೆ 1693 ಮಂದಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.
ಇಂದು ಉಡುಪಿ ಜಿಲ್ಲಾಧಿಕಾರಿ ಡಾ. ವಿಶಾಲ ಅವರ ನೇತ್ರತ್ವದಲ್ಲಿ ಉಡುಪಿಯಲ್ಕ್ಲಿ ಮಸ್ಟರಿಂಗ್ ಕಾರ್ಯ ಹಾಗೂ ಕುಂದಾಪುರ ಉಪವಿಭಾಗದ ಅಧಿಕಾರಿ ಚಾರುಲತಾ ಸೋಮಲ್ ನೇತ್ರತ್ವದಲ್ಲಿ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಸ್ಟರಿಂಗ್ ಕಾರ್ಯ ನಡೆಯಿತು. ಮತಗಟ್ಟೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ ಪೆಟ್ಟಿಗೆ ಸೇರಿದಂತೆ ಇತರ ಸಾಮಾಗ್ರಿಗಳನ್ನು ಮತದಾನ ಕೇಂದ್ರಕ್ಕೆ ಪೊಲೀಸ್ ಬಂದೋಬಸ್ತಿನಲಿ ಕೊಂಡೊಯ್ಯಲಾಯಿತು.
ಷನಿವಾರ ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೂ ಮತದಾನ ನಡೆಯಲಿದ್ದು. ಮತಪೆಟ್ಟಿಗೆಯಲ್ಲಿ ಅಡಕವಾದ ಭವಿಷ್ಯ ಜೂ.5ಕ್ಕೆ ಹೊರಬೀಳಲಿದೆ.