ಕನ್ನಡ ವಾರ್ತೆಗಳು

ಕಾರಾಗೃಹದಲ್ಲಿ ವಿಶ್ವ ಪರಿಸರ ದಿನಾಚರಣೆ

Pinterest LinkedIn Tumblr

world_enverment_day

ಮಂಗಳೂರು,ಜೂನ್.06 : ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ವಕೀಲರ ಸಂಘ ಮತ್ತು ಜಿಲ್ಲಾ ಕಾರಾಗೃಹದ ಆವರಣದಲ್ಲಿ `ವಿಶ್ವ ಪರಿಸರ ದಿನಾಚರಣೆ’ ಆಚರಿಸಲಾಯಿತು.

ಹಿರಿಯ ಸಿವಿಲ್ ನ್ಯಾಯಾಧೀಶ ಗಣೇಶ ಬಿ. ಕಾರಾಗೃಹ ಆವರಣದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಗೃಹ ರಕ್ಷಕ ದಳದ ಕಮಾಡೆಂಟ್ ಡಾ. ಮುರಳಿ ಮೋಹನ ಚೂಂತಾರು, ಕಾರಾಗೃಹದ ಅಧೀಕ್ಷಕ ಬಿ.ಟಿ. ಓಬಳೇಶಪ್ಪ, ಪರಿಸರವಾದಿ ಮಾಧವ ಹಾಗೂ ಕೈದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನಿಟ್ಟೆ ವಿಶ್ವವಿದ್ಯಾಲಯದ ಎನ್‌‌ಎಸ್‌‌ಎಸ್‌‌‌‌‌‌‌ ಘಟಕದ ಸಹಯೋಗದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

Write A Comment