ಕುಂದಾಪುರ: ಮಂಗಳವಾರ ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಮನೆಯೊಂದು ಹಾನಿಯಾದ ಘಟನೆ ತಾಲೂಕಿನ ಕಟ್-ಬೆಲ್ತೂರು ಸಮೀಪದ ಮುಳ್ಳುಕುಂಟ ಎಂಬಲ್ಲಿ ನಡೆದಿದೆ.
ಸ್ಥಳೀಯ ನಿವಾಸಿಯಾಗಿರುವ ಸಾಧು ಬಳೆಗಾರ್ತಿ ಎನ್ನುವವರಿಗೆ ಸೇರಿದ ಮನೆ ಇದಾಗಿದ್ದು, ಮನೆಯ ಮೇಲ್ಚಾವಣಿ ಗೋಡೆ ಸೇರಿದಂತೆ ಅಪಾರ ನಷ್ಟ ಸಂಭವಿಸಿದೆ. ಅಲ್ಲದೇ ಇವರು ಬಳೆ ವ್ಯಾಪಾರಿಗಳಾದ ಕಾರಣ ಮನೆಯಲ್ಲಿ ಸಂಗ್ರಹಿಸಿದ್ದ ಬಳೆಗಳು ಹಾನಿಯಾಗಿದೆ.
ಘಟನೆ ವೇಳೆಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಂದಾಜು 2 ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ.
ಘಟನಾ ಸ್ಥಳಕ್ಕೆ ಸ್ಥಳೀಯ ಗ್ರಾ.ಪಂ. ಸದಸ್ಯ ರಾಮ ಕೆ. ಶೆಟ್ಟಿ ಭೇಟಿ ನೀಡಿದ್ದಾರೆ.