ಮಂಗಳೂರು,ಜೂನ್.12 : ನಗರದ ಕಂಕನಾಡಿ ಪೊಲೀಸ್ ಠಾಣೆಯನ್ನು ಕೂಡಲೇ ಸ್ಥಳಾಂತರಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ರವರು ಸೂಚನೆ ನೀಡಿದರು. ಅವರು ಶುಕ್ರವಾರ ಕಂಕನಾಡಿ ಠಾಣೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಲ್ಲಿನ ಪರಿಸ್ಥಿತಿಯನ್ನು ಗಮನಿಸಿದ ನಂತರ ಮಾದ್ಯಮದವರೊಂದಿಗೆ ಮಾತನಾಡಿದರು. ತಾವು ವಿಧಾನ ಪರಿಷತ್ ನಲ್ಲಿ ಈ ಬಗ್ಗೆ ಗೃಹ ಸಚಿವರ ಗಮನಕ್ಕೆ ತಂದಿದ್ದು ಆದಷ್ಟು ಬೇಗ ಠಾಣೆಯನ್ನು ಸ್ಥಳಾಂತರ ಮಾಡಿಸುವುದಾಗಿ ಭರವಸೆ ಕೊಟ್ಟರು.
ಮತ್ತೊಮ್ಮೆ ಸಚಿವರ ಗಮನ ಸೆಳೆಯುವುದಾಗಿ ನುಡಿದ ಅವರು ಆದರೆ ಕೂಡಲೇ ಸುಸಜ್ಜಿತ ಸ್ಥಳಕ್ಕೆ ಸ್ಥಳಾಂತರಿಸುವಂತೆ ಸೂಚಿಸಿದ್ದು ಅಧಿಕಾರಿಗಳು ಸ್ಪಂದಿಸುತ್ತಾರೆನ್ನುವ ವಿಶ್ವಾಸವಿದೆ ಎಂದರು.
ಪೊಲೀಸ್ ಠಾಣೆ ನಿರ್ಮಾಣಕ್ಕಾಗಿ ಸೂಕ್ತ ನಿವೇಶನ ಹುಡುಕುತ್ತಿದ್ದು ಕೆಲವು ತಾಂತ್ರಿಕ ಕಾರಣಗಳಿಂದಾಗಿ ನಿವೇಶನ ಆಯ್ಕೆ ಸಾಧ್ಯವಾಗಿಲ್ಲ. ಸಧ್ಯದಲ್ಲೇ ಆಗುವ ನಿರೀಕ್ಷೆ ಇರುವುದಾಗಿ ಡಿಸಿಪಿ ವಿಷ್ಣುವರ್ದನ್ ತಮಗೆ ತಿಳಿಸಿದ್ದಾರೆ ಎಂದು ಅವರು ಹೇಳಿದರು.
ಮೇಯರ್ ಜೆಸಿಂತಾ ವಿಲ್ಫ್ರೆಡ್ ಡಿಸೋಜಾ, ಉಪಮೇಯರ್ ಪುರುಷೋತ್ತಮ ಚಿತ್ರಾಪುರ ಮೊದಲಾದವರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.