(ಆರೋಪಿ ನಾಗರಾಜ್)
ಕುಂದಾಪುರ: ಮದುವೆಯಾಗುವುದಾಗಿ ನಂಬಿಸಿ ಕಳೆದ ಐದು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರಗೈದ ವ್ಯಕ್ತಿಯೊಬ್ಬ ಯುವತಿಯನ್ನು ಮದುವೆಯಾಗಲು ಒಪ್ಪದೇ ಆಕೆಗೆ ಕೊಲೆ ಬೆದರಿಕೆ ಹಾಕಿದ ಬಗ್ಗೆ ನೊಂದ ಯುವತಿ ಪೊಲೀಸರ ಮೊರೆ ಹೋಗಿದ್ದಾಳೆ.
ಬೈಂದೂರು ಸಮೀಪದ ಉಪ್ಪುಂದದ ನಿವಾಸಿ ನಾಗರಾಜ ಖಾರ್ವಿ ವಿರುದ್ಧ ಬಿಜೂರು ಗ್ರಾಮದ ಯುವತಿಯೋರ್ವಳು ಬಂದೂರು ಠಾಣೆಯಲ್ಲಿ ದೂರು ನೀಡಿದ್ದಾಳೆ.
ಆರೋಪಿ ನಾಗರಾಜ ಯುವತಿಯ ತಂದೆ ತಾಯಿಯಲ್ಲಿ ತಾನು ಈಕೆಯನ್ನು ಮದುವೆಯಾಗುವುದಾಗಿ ತಿಳಿಸಿ ಆಗಾಗ ಈ ಯುವತಿಯ ಮನೆಗೆ ಬರುತ್ತಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ. ಅಲ್ಲದೇ ಈ ಅತ್ಯಾಚಾರದ ವಿಚಾರವನ್ನು ತಿಳಿಸಿದ್ದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಈ ಬಗ್ಗೆ ಬಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗೆ ನ್ಯಾಯಾಲಯವು ನ್ಯಾಯಂಗ ಬಂಧನ ವಿಧಿಸಿದೆ.