ಮಂಗಳೂರು,ಜೂನ್.15: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ಗೆ ಸಂಸದರಾಗಿ ಒಂದು ವರ್ಷ ಅವಧಿಯಲ್ಲಿ ಸಂಸದರ ಪ್ರದೇಶಾಭಿವೃದ್ಧಿ ನಿಧಿ ಬಳಕೆಯಲ್ಲಿ ರಾಜ್ಯದಲ್ಲಿ ನಂ.1 ಸ್ಥಾನ ಹಾಗೂ ರಾಜ್ಯದ ಅತ್ಯುತ್ತಮ ಸಂಸದ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದು, ಅವರನ್ನು ಜಿಲ್ಲೆಯ ನಾಗರಿಕರ ಪರವಾಗಿ ಅಭಿನಂದಿಸುವ ‘ಸಂಸದರ ನಮನ’ ಕಾರ್ಯಕ್ರಮ ಜೂ.18ರಂದು ನಗರದ ಟಿ.ವಿ. ರಮಣ ಪೈ ಕನ್ವೆನ್ಶನ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮ ಸಂಜೆ 5.30 ಗಂಟೆಗೆ ನಡೆಯಲಿದ್ದು, ಕೇಂದ್ರ ಸಚಿವ ಅನಂತ ಕುಮಾರ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಮೈಸೂರು ಸಂಸದ ಪ್ರತಾಪ್ಸಿಂಹ, ಯುವ ಬ್ರಿಗೇಡ್ನ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ರಾಜೇಂದ್ರ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಉಡುಪಿಯ ಜಿ. ಶಂಕರ್ ಜಾರಿಟೆಬಲ್ ಟ್ರಸ್ಟ್ ಜಿ. ಶಂಕರ್ ಆಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಸದರಿಗೆ ನಮನ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.