ವರದಿ : ಈಶ್ವರ ಎಂ. ಐಲ್ / ಚಿತ್ರ,: ದಿನೇಶ್ ಕುಲಾಲ್
ಮುಂಬಯಿ : ಬಂಟರ ಸಂಘ ಮುಂಬಯಿ ವತಿಯಿಂದ ಜೂನ್ 21ರಂದು ಪೊವಾಯಿ ಎಸ್. ಎಂ. ಶೆಟ್ಟಿ ಶಿಕ್ಷಣ ಸಂಸ್ಥೆಯಲ್ಲಿ ಜರಗಿದ ವಿಶ್ವ ಯೋಗ ದಿನಾಚರಣೆ ಯ ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿಯವರು ವಹಿಸಿದ್ದರು.
ಐನೂರಕ್ಕೂ ಮಿಕ್ಕಿ ಪುರುಷರು, ಮಹಿಳೆಯರು ಹಾಗೂ ಮಕ್ಕಳು ಇದರಲ್ಲಿ ಭಾಗವಹಿಸಿದ್ದರು. ಯೋಗಾಭ್ಯಾಸದ ಬಗ್ಗೆ ಅಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿಯವರು ಮಾತನಾಡುತ್ತಾ ಮಾನಸಿಕ ಮತ್ತು ದೈಹಿಕ ಶಕ್ತಿಯನ್ನು ಹೆಚ್ಚಿಸಲು ಇದು ಪೂರಕ ಎಂದರು.
ಬಂಟರ ಸಂಘದ ಇತರ ಪದಾಧಿಕಾರಿಗಳು, ಸದಸ್ಯರುಗಳು ಈ ಸಮಾರಂಭದಲ್ಲಿ ಭಾಗವಹಿಸಿದ್ದರು.