ಮಂಗಳೂರು, ಜುಲೈ. 06: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡೆ, ಜಿಲ್ಲಾ ಪಂಚಾಯತ್ ಸದಸ್ಯೆ, ಯಶವಂತಿ ಆಳ್ವ ಸೋಮವಾರ ಮುಂಜಾನೆ ಅಲ್ಪಕಾಲದ ಅಸ್ವಸ್ಥತೆಯಿಂದ ನಿಧನರಾದರು.
ಅವರಿಗೆ 62 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ಸಮಯಗಳಿಂದ ಆರೋಗ್ಯ ಸಮಸ್ಯೆಯಿಂದ ಅವರು ಬಳಲುತ್ತಿದ್ದು . ನಗರದ ಕದ್ರಿ ಶಿವಭಾಗ್ ನಲ್ಲಿ ವಾಸ್ತವ್ಯವಿದ್ದ ಅವರು ಹಲವು ವರ್ಷಗಳಿಂದ ಕಾಂಗ್ರೆಸ್ ನಲ್ಲಿ ಸಕ್ರೀಯ ವಾಗಿ ಕಾರ್ಯ ನಿರ್ವಹಿಸಿ, ಹಲವು ಅಭಿವೃದ್ಧಿ ಕಾರ್ಯಗಳ ಮೂಲಕ ಜನಮನ್ನಣೆಗಳಿಸಿದ್ದರು.
ಮೃತರು ಇಬ್ಬರು ಹೆಣ್ಣು ಹಾಗೂ ಓರ್ವ ಗಂಡು ಮಕ್ಕಳನ್ನು ಅಗಲಿದ್ದಾರೆ.