ಮಂಗಳೂರು, ಜು.14: ಬಜ್ಪೆ ಸಂತ ಜೋಸೆಫರ್ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ ಶುಕ್ರವಾರ ನಡೆದಿದ್ದ ಹಲ್ಲೆ ಪ್ರಕರಣ ಸೋಮವಾರ ಮಾತುಕತೆ ಮೂಲಕ ಇತ್ಯರ್ಥಪಡಿಸಲಾಗಿದೆ.
ಶುಕ್ರವಾರದ ಪ್ರಾರ್ಥನೆ ಮುಗಿಸಿ ಕಾಲೇಜಿಗೆ ಹೋಗಿದ್ದ ವಿದ್ಯಾರ್ಥಿ ಸಿದ್ದೀಕ್ಎಂಬವರಿಗೆ ಕಾಲೇಜಿನ ಪ್ರಾಂಶುಪಾಲರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ಹಲ್ಲೆಯಿಂದ ಗಾಯಗೊಂಡಿದ್ದ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಸಿಎಫ್ಐ ಪ್ರತಿಭಟನೆ ನಡೆಸಿತ್ತು. ಎಸ್ಸೆಸ್ಸೆಫ್ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ ನ್ಯಾಯಕ್ಕಾಗಿ ಆಗ್ರಹಿಸಿತ್ತು.
ಸೋಮವಾರ ಕಾಲೇಜಿನ ಆಡಳಿತ ಮಂಡಳಿಯು ಸ್ಥಳೀಯ ನಾಯಕರು, ವಿದ್ಯಾರ್ಥಿಯ ಹೆತ್ತವರು ಮತ್ತಿತರ ಜತೆ ನಡೆಸಿದ ಸಂಧಾನ ಮಾತುಕತೆ ಫಲಪ್ರದವಾಗಿದ್ದು, ಪ್ರಕರಣ ಸೌಹಾರ್ದಯುತವಾಗಿ ಇತ್ಯರ್ಥಪಡಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.