ಕಾರ್ಕಳ, ಜುಲೈ.21: ಭಾರೀ ಮಳೆಯ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾಲೇಜು ಬಸ್ಸೊಂದು ರಸ್ತೆ ಪಕ್ಕದ ಕಮರಿಗೆ ಪಲ್ಟಿಯಾದ ಘಟನೆ ಇಲ್ಲಿನ ನಗರ ಠಾಣೆ ವ್ಯಾಪ್ತಿಯ ಗುಂಡ್ಯಡ್ಕ ಎಂಬಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ಕಾರ್ಕಳ ಖಾಸಗಿ ಕಾಲೇಜೊಂದಕ್ಕೆ ಸೇರಿದ ಈ ಬಸ್ ಇಂದು ಬೆಳಿಗ್ಗೆ ವಿದ್ಯಾರ್ಥಿಗಳನ್ನು ಕಾಲೇಜಿಗೆ ಕರೆ ತರುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ಬಸ್ ಜಖಂಗೊಂಡಿದ್ದು, ಘಟನೆಯಲ್ಲಿ ವಿದ್ಯಾರ್ಥಿಗಳಿಗೆ ಗಾಯಗೊಂಡ ವಿದ್ಯಾರ್ಥಿಗಳನ್ನು ಕಾರ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದೆರಡು ದಿನಗಳಿಂದ ಈ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ತಾಲೂಕಿನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ಸೊಂದು ನಿಯಂತ್ರಣ ರಸ್ತೆ ವಿಭಾಜಕ ಸೇರಿದ ಘಟನೆ ಮೊನ್ನೆಯಷ್ಟೇ ನಡೆದಿದ್ದರೆ, ಭಾರೀ ಮಳೆಗೆ ಇಲ್ಲಿನ ನಲ್ಲೂರು ಕ್ರಾಸ್ ಬಳಿ ಎರಡು ಕಾರುಗಳು ಅಪಘಾತಕ್ಕೀಡಾಗಿದ್ದವು.