ಕನ್ನಡ ವಾರ್ತೆಗಳು

ಜು. 24ರಂದು ಕ್ರೀಡಾ ಭಾರತಿಯಿಂದ ಕ್ರೀಡಾ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Pinterest LinkedIn Tumblr

Kreeda_Bharathi_Press_2

ಮಂಗಳೂರು, ಜು. 22: ಕ್ರೀಡಾ ಭಾರತಿ ಮಂಗಳೂರು ವಿಭಾಗದ ವತಿಯಿಂದ ಕ್ರೀಡಾ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜು. 24ರಂದು ಬೆಳಗ್ಗೆ 11 ಗಂಟೆಗೆ ನಗರದ ಸಂಘನಿಕೇತನದಲ್ಲಿ ನಡೆಯಲಿದೆ ಎಂದು ಕ್ರೀಡಾ ಭಾರತಿಯ ಗೌರವಾಧ್ಯಕ್ಷ ಬಿ.ನಾಗರಾಜ್ ಶೆಟ್ಟಿ ತಿಳಿಸಿದ್ದಾರೆ.

ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮಂಗಳೂರು ಉತ್ತರ ಮತ್ತು ದಕ್ಷಿಣದ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕ್ರೀಡಾ ಪ್ರತಿಭೆಗಳನ್ನು ಅವರ ಹೆತ್ತವರ ಸಮ್ಮುಖದಲ್ಲಿ ಪುರಸ್ಕರಿಸಲಾಗುವುದು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ವಿವರಿಸಿದರು.

Kreeda_Bharathi_Press_1

ತಾಲೂಕಿನ ಪ್ರತಿಭೆಗಳನ್ನು ಈ ವೇಳೆ ಗೌರವಿಸಲಾಗುವುದು. ವನಿತೆಯರ ಭಾರತ ವಾಲಿಬಾಲ್ ತಂಡದ ನಾಯಕಿ ಮಲ್ಲಿಕಾ ಶೆಟ್ಟಿ, ಕಬಡ್ಡಿ ಪ್ರತಿಭೆ ಮಮತಾ ಪೂಜಾರಿ, ಸ್ಕೇಟಿಂಗ್ ಮತ್ತು ಹ್ಯಾಂಡ್‌ಬಾಲ್‌ನಲ್ಲಿ ಸಾಧನೆ ಮಾಡಿರುವ ಸಾಲಿಯಾ ಸಿಮ್ಮಿತ್, ುಟ್ಬಾಲ್ ಆಟಗಾರ ಮುಹಮ್ಮದ್ ರ್ದೀನ್ ಮುಂತಾದವರನ್ನು ಅವರ ಹೆತ್ತವರ ಸಮ್ಮುಖದಲ್ಲಿ ಕ್ರೀಡಾ ಭಾರತಿಯ ಜೀಜಾಬಾಯಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಅಲ್ಲದೇ ಹಲವು ಕ್ರೀಡಾಪಟುಗಳನ್ನು ಬೆಳೆಸಿದ, ಕ್ರೀಡೆಗಾಗಿ ದುಡಿದ ನಿವೃತ್ತ ದೈಹಿಕ ಶಿಕ್ಷಕರನ್ನು ಈ ವೇಳೆ ಅಭಿನಂದಿಸಲಾಗುವುದು ಎಂದು ಅವರು ತಿಳಿಸಿದರು.

ಕ್ರೀಡಾ ಭಾರತಿ ಅಧ್ಯಕ್ಷ ಕೆ.ಚಂದ್ರಶೇಖರ್ ರೈ, ಮಂಗಳೂರು ಉತ್ತರ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ದಯಾನಂದ ಮಾಡ, ಸಂಘದ ಮಂಗಳೂರು ದಕ್ಷಿಣ ಅಧ್ಯಕ್ಷೆ ಸೇವಂತಿ, ಭೋಜರಾಜ್ ಕಲ್ಲಡ್ಕ ಉಪಸ್ಥಿತರಿದ್ದರು.

Write A Comment