ಮಂಗಳೂರು,ಜುಲೈ.22 : ವಿದುಷಿ, ಶ್ರೀದೇವಿ ನೃತ್ಯಕೇಂದ್ರ ಇದರ ಹಿರಿಯ ನೃತ್ಯಗುರು, ನಿರ್ದೇಶಕಿ ಶ್ರೀಮತಿ ಜಯಲಕ್ಷ್ಮೀ ಆಳ್ವ (81ವ.) ಹೃದಯಾಘಾತ ದಿಂದ ಮಂಗಳವಾರ ನಿಧನ ಹೊಂದಿದರು. ನಾಟ್ಯ ರಾಣಿ ಶಾಂತಲ ಪ್ರಶಸ್ತಿ, ನೃತ್ಯಕಲಾ ಶಿರೋಮಣಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಕಲಾ ತಿಲಕ ಪ್ರಶಸ್ತಿ ಪುರಸ್ಕೃತರಾದ ದಿವಂಗತರ ನಿಧನಕ್ಕೆ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ತಮ್ಮ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
ಶ್ರದ್ಧಾಂಜಲಿ ಸಭೆ :
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತು, ಲಲಿತ ಕಲಾ ಪರಿಷತ್ತು ಹಾಗೂ ಸಂಸ್ಕಾರ ಭಾರತಿ ಮಂಗಳೂರು ವತಿಯಿಂದ 23/07/2015 ಗುರುವಾರ ಬೆಳಿಗ್ಗೆ 10.15ಕ್ಕೆ ವುಡ್ಲ್ಯಾಂಡ್ಸ್ ಹೋಟೆಲ್ ಸಭಾಂಗಣದಲ್ಲಿ ಜಯಲಕ್ಷ್ಮೀ ಆಳ್ವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.