ಉಡುಪಿ: ಮಾಜಿ ಸಚಿವ ವಸಂತ ಸಾಲ್ಯಾನ್ ಅವರು ಅಸೌಖ್ಯದಿಂದ ಶನಿವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಶನಿವಾರ ಸಂಜೆ ವೇಳೆ ಎದೆನೋವು ಹಾಗೂ ಅಸೌಖ್ಯದಿಂದ ಬಳಲುತ್ತಿದ್ದ ಸಾಲ್ಯಾನ್ ಅವರನ್ನು ಕೂಡಲೇ ಉಡುಪಿ ಅಂಬಲಪಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿಯೇ ಅವರು ಕೊನೆಯುಸಿರೆಳೆದಿದ್ದಾರೆ.
ಕಾಪು ಕ್ಷೇತ್ರದಲ್ಲಿ ಸತತ ಐದು ಬಾರಿ ಶಾಸಕರಾಗಿದ್ದ ಅವರು, ಎರಡು ಬಾರೀ ಸಚಿವರಾಗಿದ್ದರು. ಹಲವು ವರ್ಷಗಳ ಕಾಲ ಕಾಂಗ್ರೆಸ್ ಮುಖಂಡರಾಗಿಯೂ ಇದ್ದರು. ಬಳಿಕ ಜೆಡಿಎಸ್ ಪಕ್ಷದಲ್ಲಿಯೂ ಗುರುತಿಸಿಕೊಂಡಿದ್ದು ಹಾಗೂ ಪ್ರಸ್ತುತ ಬಿಜೆಪಿ ಪಕ್ಷದಲ್ಲಿದ್ದಾರೆ.
ವಸಂತ ಸಾಲ್ಯಾನ್ ಅವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.