ಕನ್ನಡ ವಾರ್ತೆಗಳು

ತ್ರಾಸಿ: ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿ; ಲಾರಿ ಚಾಲಕ ಗಂಭೀರ; ಬಸ್ಸಿನಲ್ಲಿದ್ದ ಹಲವರಿಗೆ ಗಾಯ

Pinterest LinkedIn Tumblr

ಕುಂದಾಪುರ:  ಭಟ್ಕಳದಿಂದ ಕುಂದಾಪುರಕ್ಕೆ ಹೋಗುತ್ತಿದ್ದ ಖಾಸಗಿ (ಎ.ಪಿ.ಎಂ.) ಬಸ್ ಹಾಗೂ ಮುಂಬೈ ಕಡೆಗೆ ಸಾಗುತ್ತಿದ್ದ ಟ್ರೇಲರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಲಾರಿ ಕ್ಲೀನರ್ ಮತ್ತು ಚಾಲಕ ಗಂಭೀರ ಗಾಯಗೊಂಡ ಘಟನೆ ಮರವಂತೆ ಸಮೀಪದ ತ್ರಾಸಿ ಬೀಚ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಗಂಭೀರವಾಗಿ ಗಾಯಗೊಂಡ ಲಾರಿ ಚಾಲಕನನ್ನ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಅಲ್ಲದೇ ಬಸ್ಸಿನ ಚಾಲಕ ಹಾಗೂ ಬಸ್ಸಿನಲ್ಲಿದ್ದ ನಾಲ್ಕು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಇವರನ್ನು ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.

Lorry Bus_Accident_Trasi (2) Lorry Bus_Accident_Trasi (3)

Lorry Bus_Accident_Trasi (1)

Lorry Bus_Accident_Trasi (4)

ಅಪಘಾತದಿಂದ ಸುಮಾರು ಒಂದು ಘಂಟೆಗಳ ಕಾಲ ರಸ್ತೆ ಸಂಚಾರಕ್ಕೆ ತೊಂದರೆಯುಂಟಾಗಿ ವಾಹನಗಳ ದಟ್ಟಣೆಯುಂಟಾಗಿತ್ತು. ಕ್ರೇನ್ ನ ಮುಖಾಂತರ ಲಾರಿ ಹಾಗೂ ಬಸ್ಸನ್ನು ಸಾರ್ವಜನಿಕರು ಮತ್ತು ಪೋಲೀಸರು ಒಟ್ಟುಗೂಡಿ ತೆರವುಗೊಳಿಸಿ ಸುಗಮ ಸಂಚಾರಕ್ಕೆಅನುವು ಮಾಡಿಕೊಟ್ಟರು.

ಗಂಗೊಳ್ಳಿ ಪೋಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Write A Comment