ಮಂಗಳೂರು,ಸೆ.18 : ಕೊಣಾಜೆ ಮುಡಿಪುನ ಬಳಿಯ ನಿರ್ಜನ ಗುಡ್ಡ ಪ್ರದೇಶದಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಸೋಮೇಶ್ವರ ಉಚ್ಚಿಲ ನಿವಾಸಿ ಜಯಪ್ರಕಾಶ್ (35) ಎಂದು ಗುರುತಿಸಲಾಗಿದೆ.
ಜಯಪ್ರಕಾಶ್ ಬುಧವಾರ ಬೆಳಗ್ಗೆ ಹತ್ತು ಗಂಟೆಯಿಂದ ಯಾರ ಸಂಪರ್ಕಕ್ಕೂ ಸಿಗದೆ ನಾಪತ್ತೆಯಾಗಿದ್ದರು ಎನ್ನಲಾಗಿದೆ. ಈ ಕುರಿತು ಜಯಪ್ರಕಾಶ್ ಮನೆಯವರು ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಸಾಯಂಕಾಲ ನಾಪತ್ತೆ ಪ್ರಕರಣದ ದೂರನ್ನೂ ದಾಖಲಿಸಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ . ಜಯಪ್ರಕಾಶ್ ಪಂಪ್ ವೆಲ್ ಬಳಿ ಇನ್ವೆಟರ್ ವ್ಯವಹಾರ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.
ಕೋಣಾಜೆ ಪೊಲೀಸರು ಆತ್ಮಹತ್ಯಾ ಪ್ರಕರಣವೆಂದು ದಾಖಲಿಸಿಕೊಂಡಿದ್ದು,