ಕನ್ನಡ ವಾರ್ತೆಗಳು

ಬಹು ನಿರೀಕ್ಷಿತ `ಚಂಡಿಕೋರಿ’ ತುಳು ಚಲನಚಿತ್ರ ಕರಾವಳಿ ಜಿಲ್ಲೆಯಾದ್ಯಂತ ನಾಳೆ ಏಕಕಾಲದಲ್ಲಿ ಬಿಡುಗಡೆ.

Pinterest LinkedIn Tumblr

Chandikor_Press_1

ಮಂಗಳೂರು, ಸೆ.24: ದೇವದಾಸ್ ಕಾಪಿಕಾಡ್ ನಿರ್ದೇಶನದ ಬಹು ನಿರೀಕ್ಷಿತ `ಚಂಡಿಕೋರಿ’ ತುಳು ಚಲನಚಿತ್ರ ಕರಾವಳಿ ಜಿಲ್ಲೆಯಾದ್ಯಂತ ನಾಳೆ 11 ಚಿತ್ರಮಂದಿರಗಳಲ್ಲಿ ಏಕಕಾಲದಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ದೇವದಾಸ್ ಕಾಪಿಕಾಡ್ ತಿಳಿಸಿದ್ದಾರೆ.

ಬುಧವಾರ ಸಂಜೆ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರಿನ ಸುಚಿತ್ರ, ಬಿಗ್ ಸಿನೆಮಾಸ್, ಸಿನಿಪೊಲಿಸ್, ಪಿವಿಆರ್ ಉಡುಪಿಯಲ್ಲಿ ಕಲ್ಪನಾ, ಮೂಡಬಿದ್ರೆಯಲ್ಲಿ ಅಮರಶ್ರೀ, ಬಿ.ಸಿರೋಡ್‍ನ ನಕ್ಷತ್ರ, ಪುತ್ತೂರಿನಲ್ಲಿ ಅರುಣಾ, ಬೆಳ್ತಂಗಡಿಯಲ್ಲಿ ಭಾರತ್, ಕಾರ್ಕಳದಲ್ಲಿ ರಾಧಿಕ, ಸುರತ್ಕಲ್ ನ ನಟರಾಜ್ ಚಿತ್ರಮಂದಿರದಲ್ಲಿ ಚಂಡಿಕೋರಿ ತೆರೆ ಕಾಣಲಿದೆ ಎಂದರು.

Chandikor_Press_2 Chandikor_Press_3 Chandikor_Press_4 Chandikor_Press_5

ಬೊಳ್ಳಿ ಮೂವೀಸ್ ಲಾಂಛನದಡಿಯಲ್ಲಿ ನಿರ್ಮಿಸಿರುವ ಚಂಡಿಕೋರಿ ಸಿನಿಮಾವು ಒಂದು ಭಿನ್ನ ಕಥೆ, ಉತ್ತಮ ಸಂದೇಶ ಮತ್ತು ಮೌಲ್ಯಗಳನ್ನು ಹೊತ್ತು ಬರಲಿದೆ. ಜತೆಗೆ ನವಿರಾದ ಪ್ರೇಮ ಕಥೆ, ಹೊಟ್ಟೆ ಹುಣ್ಣಾಗುವಂತೆ ನಗಿಸುವ ಹಾಸ್ಯವೂ ಇದೆ. ಸುಮಾರು 2 ತಾಸು 20 ನಿಮಿಷಗಳ ಈ ಸಿನಿಮಾವು ಪ್ರೇಕ್ಷಕರು ತಲೆದೂಗುವಷ್ಟು ಮನೋರಂಜನೆಯೊಂದಿಗೆ ತುಳುವಿನ ಮತ್ತೊಂದು ಸೂಪರ್ ಹಿಟ್ ಮತ್ತು ಶ್ರೇಷ್ಠ ಸಿನಿಮಾದ ಸಾಲಿಗೆ ಸೇರಲಿದೆ ಎಂದು ಅವರು ವಿವರಿಸಿದರು.

ಮಂಗಳೂರು ಸುತ್ತಮುತ್ತ 31 ದಿನಗಳ ಕಾಲ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಸಿರುವ ಚಂಡಿಕೋರಿಯಲ್ಲಿ 4 ಉತ್ತಮ ಹಾಡುಗಳಿವೆ. ಅತ್ಯಂತ ವಿಶೇಷವೆಂದರೆ ಈ ಸಿನಿಮಾದಲ್ಲಿ ತಂದೆ- ಮಗ ಹಾಡಿದ್ದಾರೆ. ಅಂದರೆ, ಸಿನಿಮಾದ ನಾಯಕನೂ ಆಗಿರುವ ಅರ್ಜುನ್ ಕಾಪಿಕಾಡ್ ಮತ್ತು ದೇವದಾಸ್ ಕಾಪಿಕಾಡ್ ಅವರು ಹಾಡಿರುವ ಹಾಡುಗಳಿವೆ. ಮಣಿಕಾಂತ್ ಕದ್ರಿ ಅವರ ಹಿನ್ನೆಲೆ ಸಂಗೀತವಿರುವ ಈ ಸಿನಿಮಾದಲ್ಲಿ ಅವರೂ ಒಂದು ಹಾಡು ಹಾಡಿದ್ದಾರೆ. ಮತ್ತೊಂದು ಹಾಡನ್ನು ಮಧುಬಾಲಕೃಷ್ಣನ್ ಮತ್ತು ಅಪೂರ್ವ ಶ್ರೀಧರ್ ಹಾಡಿದ್ದಾರೆ.

ಅರ್ಜುನ್ ಕಾಪಿಕಾಡ್ ಚಿತ್ರದ ನಾಯಕರಾಗಿದ್ದು, ಕರಿಷ್ಮಾ ಅಮೀನ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ನವೀನ್ ಡಿ. ಪಡೀಲ್, ಭೋಜರಾಜ್ ವಾಮಂಜೂರು, ಅರವಿಂದ ಬೋಳಾರ್, ಸತೀಶ್ ಬಂದಲೆ ಮುಂತಾದ ತುಳು ರಂಗಭೂಮಿ ಮತ್ತು ಸಿನಿಮಾ ರಂಗದ ಪ್ರಮುಖ ಕಲಾವಿದರು ನಟಿಸಿರುವುದು ಒಂದು ಪ್ಲಸ್ ಪಾಯಿಂಟ್.

Chandi_Kori_CDreleas_32 Chandi_Kori_CDreleas_31 Chandi_Kori_CDreleas_30 Chandi_Kori_CDreleas_29 Chandi_Kori_CDreleas_28 Chandi_Kori_CDreleas_27 Chandi_Kori_CDreleas_26 Chandi_Kori_CDreleas_25 Chandi_Kori_CDreleas_24 Chandi_Kori_CDreleas_23 Chandi_Kori_CDreleas_11 chandi_kori_FILM_8 chandi_kori_FILM_7 chandi_kori_FILM_2

ಕಣ್ಣಿಗೆ ಕಾಣುವ ದೇವರೆಂದರೆ ಹೆತ್ತವರು. ಅವರನ್ನು ಗೌರವಿಸುವುದು ಎಲ್ಲರ ಕರ್ತವ್ಯ ಎಂಬ ಸಂದೇಶ ಹೊಂದಿರುವ ಚಂಡಿಕೋರಿಯಲ್ಲಿ ತಾಳ್ಮೆಯ ಮಹತ್ವವನ್ನೂ ತಿಳಿಸಲಾಗಿದೆ. ಉತ್ತಮ ಸಂದೇಶ ಮತ್ತು ಯಥೇಚ್ಛ ಮನೋರಂಜನೆ ನೀಡುವಲ್ಲಿ ಎತ್ತಿದ ಕೈಯಾಗಿರುವ ದೇವದಾಸ್ ಕಾಪಿಕಾಡ್ ಅವರ ತಂಡದಿಂದ ಸಿದ್ಧವಾಗಿರುವ ಚಂಡಿಕೋರಿ ಕೂಡ ಚಿತ್ರಪ್ರೇಮಿಗಳ ಮನ ಗೆದ್ದು ಯಶಸ್ಸು ಸಾಧಿಸುವ ನಿರೀಕ್ಷೆ ಇದೆ. ಈ ಸಿನಿಮಾ ಬಿಡುಗಡೆಗಾಗಿ ಚಿತ್ರಪ್ರೇಮಿಗಳು ತುದಿಗಾಲಲ್ಲಿ ನಿಂತಿದ್ದು, ಬಿಡುಗಡೆ ದಿನ ನಿಗದಿಯಾಗಿರುವುದು ಅವರಿಗೆ ಖುಷಿ ತರಲಿದೆ ಎಂದರು.

ತಾರಾಗಣದಲ್ಲಿ ಗೋಪಿನಾಥ ಭಟ್, ಚೇತನ್ ರೈ ಮಾಣಿ, ತಿಮ್ಮಪ್ಪ ಕುಲಾಲ್, ಸುರೇಶ್ ಕುಲಾಲ್, ಉಮೇಶ್ ಮಿಜಾರ್, ಪಾಂಡುರಂಗ, ರಿಚರ್ಡ್ ಪಿಂಟೋ, ರಾಘವೇಂದ್ರ ಕಾರಂತ, ಮಾಸ್ಟರ್ ಕೃತಿನ್, ಶರ್ಮಿಳಾ ಕಾಪಿಕಾಡ್, ಮನೀಷಾ, ಸರೋಜಿನಿ ಶೆಟ್ಟಿ, ಸುಜಾತ ಶಕ್ತಿನಗರ, ಸುಮಿತ್ರಾ ರೈ, ಲಾವಣ್ಯ ಬಂಗೇರ ಮೊದಲಾದವರಿದ್ದಾರೆ.

ಛಾಯಾಗ್ರಹಣ ಪಿ.ಎಲ್.ರವಿ, ಸಂಕಲನ: ಸುಜೀತ್ ನಾಯಕ್. ನೃತ್ಯ: ಅಕುಲ್, ಸಾಹಸ: ಮಾಸ್‍ಮಾಧ. ನಿರ್ಮಾಣ ನಿರ್ವಹಣೆ: ರಾಜೇಶ್ ಕುಡ್ಲ, ಹಿನ್ನಲೆ ಸಂಗೀತ ಕದ್ರಿ ಮಣಿಕಾಂತ್. ಕಥೆ, ಚಿತ್ರಕಥೆ: ಸಂಭಾಷಣೆ, ಸಾಹಿತ್ಯ, ಸಂಗೀತ, ನಿರ್ದೇಶನ ದೇವದಾಸ್ ಕಾಪಿಕಾಡ್ ಅವರದ್ದಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಚಿತ್ರದ ನಿರ್ಮಾಪರಾದ ಶರ್ಮಿಳಾ ಕಾಪಿಕಾಡ್, ಸಚಿನ್.ಎಸ್, ನಾಯಕ ನಟ ಅರ್ಜುನ್ ಕಾಪಿಕಾಡ್, ನಾಯಕಿ ನಟಿ, ಕರೀಷ್ಮಾ, ಛಾಯಗ್ರಾಹಕ ರವಿ, ಕಲಾವಿದರಾದ ನವೀನ್ ಪಡೀಲ್, ಭೋಜರಾಜ್ ವಾಮಂಜೂರು, ಅರವಿಂದ್ ಬೋಳಾರ ಹಾಗೂ ಮತ್ತಿತರರು ಚಿತ್ರದ ಕುರಿತು ಪೂರಕ ಮಾಹಿತಿಗಳನ್ನು ನೀಡಿದರು.

Write A Comment